ಯೋಗಿ ಸರ್ಕಾರವು ಶಾಸಕರ ಸಂಬಳ ಕಡಿತಗೊಳಿಸುವ ಸಾಧ್ಯತೆ
ಲಕ್ನೋ, ಏ.7 ,ಕೇಂದ್ರದ ಸರ್ಕಾರದಂತೆ, ಉತ್ತರ ಪ್ರದೇಶ ಸರ್ಕಾರವು ಶಾಸಕರು ಮತ್ತು ಮಂತ್ರಿಗಳ ವೇತನವನ್ನು ಶೇಕಡಾ 30 ರಷ್ಟು ಕಡಿತಗೊಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಅಧಿಸೂಚನೆಯ ಮೂಲಕ ಸರ್ಕಾರವು ಸಂಪುಟದಲ್ಲಿ ಪ್ರಸ್ತಾವನೆಯನ್ನು ಅನುಮೋದಿಸುವ ಮೂಲಕ ಶೀಘ್ರದಲ್ಲೇ ಸುಗ್ರೀವಾಜ್ಞೆಯನ್ನು ತರುವ ಸಾಧ್ಯತೆ ಇದೆ. ಕೋವಿಡ್-19 ನಿಧಿ ಹಣವನ್ನು ಸಂಗ್ರಹಿಸಲು ಶಾಸಕರು ಮತ್ತು ಸಚಿವರ ವೇತನವನ್ನು ಕಡಿತಗೊಳಿಸುವುದರ ಜೊತೆಗೆ ಮುಂದಿನ ಎರಡು ವರ್ಷಗಳವರೆಗೆ ನೀಡಲಾಗುವ ಶಾಸಕರ ಅಭಿವೃದ್ಧಿ ನಿಧಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಂದೂಡಬಹುದು ಎಂದು ಸರ್ಕಾರದ ಮೂಲಗಳು ಮಂಗಳವಾರ ತಿಳಿಸಿವೆ.ವಿಪತ್ತಿನ ಈ ಸಮಯದಲ್ಲಿ ವಿರೋಧ ಪಕ್ಷಗಳು ಸರ್ಕಾರದ ಈ ಕ್ರಮವನ್ನು ಬೆಂಬಲಿಸುತ್ತವೆ ಎಂದು ಅವರು ಹೇಳಿದ್ದಾರೆ. ಈ ಎಲ್ಲಾ ಪ್ರಕ್ರಿಯೆ ಪಾರದರ್ಶಕತೆಯಿಂದ ಮಾಡಲಾಗುವುದು. ಈ ಹಣವನ್ನು ಕೋವಿಡ್ -19 ಪೀಡಿತರ ಜನರಿಗಾಗಿ ಬಳಸಲಾಗುತ್ತದೆ. ಸೋಮವಾರ, ಸುಗ್ರೀವಾಜ್ಞೆಯ ಮೂಲಕ ಕೇಂದ್ರ ಸರ್ಕಾರವು ಮಂತ್ರಿಗಳು ಮತ್ತು ಸಂಸದರ ವೇತನವನ್ನು ಕಡಿತಗೊಳಿಸಿದೆ ಮತ್ತು ಸಂಸದರ ನಿಧಿಯನ್ನು ಸಹ ಎರಡು ವರ್ಷಗಳವರೆಗೆ ಸ್ಥಗಿತಗೊಳಿಸಿದೆ ಎಂದು ತಿಳಿದಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 