ಯೋಗಿ ಸರ್ಕಾರವು ಶಾಸಕರ ಸಂಬಳ ಕಡಿತಗೊಳಿಸುವ ಸಾಧ್ಯತೆ
ಲಕ್ನೋ, ಏ.7 ,ಕೇಂದ್ರದ ಸರ್ಕಾರದಂತೆ, ಉತ್ತರ ಪ್ರದೇಶ ಸರ್ಕಾರವು ಶಾಸಕರು ಮತ್ತು ಮಂತ್ರಿಗಳ ವೇತನವನ್ನು ಶೇಕಡಾ 30 ರಷ್ಟು ಕಡಿತಗೊಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಅಧಿಸೂಚನೆಯ ಮೂಲಕ ಸರ್ಕಾರವು ಸಂಪುಟದಲ್ಲಿ ಪ್ರಸ್ತಾವನೆಯನ್ನು ಅನುಮೋದಿಸುವ ಮೂಲಕ ಶೀಘ್ರದಲ್ಲೇ ಸುಗ್ರೀವಾಜ್ಞೆಯನ್ನು ತರುವ ಸಾಧ್ಯತೆ ಇದೆ. ಕೋವಿಡ್-19 ನಿಧಿ ಹಣವನ್ನು ಸಂಗ್ರಹಿಸಲು ಶಾಸಕರು ಮತ್ತು ಸಚಿವರ ವೇತನವನ್ನು ಕಡಿತಗೊಳಿಸುವುದರ ಜೊತೆಗೆ ಮುಂದಿನ ಎರಡು ವರ್ಷಗಳವರೆಗೆ ನೀಡಲಾಗುವ ಶಾಸಕರ ಅಭಿವೃದ್ಧಿ ನಿಧಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಂದೂಡಬಹುದು ಎಂದು ಸರ್ಕಾರದ ಮೂಲಗಳು ಮಂಗಳವಾರ ತಿಳಿಸಿವೆ.ವಿಪತ್ತಿನ ಈ ಸಮಯದಲ್ಲಿ ವಿರೋಧ ಪಕ್ಷಗಳು ಸರ್ಕಾರದ ಈ ಕ್ರಮವನ್ನು ಬೆಂಬಲಿಸುತ್ತವೆ ಎಂದು ಅವರು ಹೇಳಿದ್ದಾರೆ. ಈ ಎಲ್ಲಾ ಪ್ರಕ್ರಿಯೆ ಪಾರದರ್ಶಕತೆಯಿಂದ ಮಾಡಲಾಗುವುದು. ಈ ಹಣವನ್ನು ಕೋವಿಡ್ -19 ಪೀಡಿತರ ಜನರಿಗಾಗಿ ಬಳಸಲಾಗುತ್ತದೆ. ಸೋಮವಾರ, ಸುಗ್ರೀವಾಜ್ಞೆಯ ಮೂಲಕ ಕೇಂದ್ರ ಸರ್ಕಾರವು ಮಂತ್ರಿಗಳು ಮತ್ತು ಸಂಸದರ ವೇತನವನ್ನು ಕಡಿತಗೊಳಿಸಿದೆ ಮತ್ತು ಸಂಸದರ ನಿಧಿಯನ್ನು ಸಹ ಎರಡು ವರ್ಷಗಳವರೆಗೆ ಸ್ಥಗಿತಗೊಳಿಸಿದೆ ಎಂದು ತಿಳಿದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 