ಝೀರೋ ಶಾಡೋ ಡೇ ನೆರಳು ಕಾಣಿಸದ ಸನ್ನಿವೇಶ ಕಂಡು ಬಂತು
ಬಳ್ಳಾರಿ,ಮೇ 02: ಕರೋನಾ ವೈರಸ್ ನಿಯಂತ್ರಣಕ್ಕೆ ದೇಶದ್ಯಾಂತ ಲಾಕ್ಡೌನ್ ಇರುವ ಸಮಯದಲ್ಲಿ ಬಳ್ಳಾರಿಯ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮೇ 01 ರ ಮಧ್ಯಾಹ್ನ 12.19ನಿಮಿಷಕ್ಕೆ ನೆತ್ತಿ ಸುಡುವಂಥ ಬಿಸಿಲಿದ್ದರೂ ನೆರಳು ಕಾಣಿಸದ ಸನ್ನಿವೇಶವು ಕಂಡು ಬಂದಿದ್ದು ಕೆಲ ನಿಮಿಷಗಳ ಕಾಲ ನೆರಳು ಮೂಡದ ಸನ್ನಿವೇಶವನ್ನು ವಿಜ್ಞಾನ ಕೇಂದ್ರದ ಸಿಬ್ಬಂದಿಗಳೊಂದಿಗೆ ವೀಕ್ಷಿಸಲಾಯಿತು ಎಂದು ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯುರೇಟರ್ ರಾದಂತಹ ಜಿ.ವಿ ಶಿವರಾಜ ತಿಳಿಸಿದ್ದಾರೆ.
ಮೇ1 ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆ 19 ನಿಮಿಷಕ್ಕೆ "ಝೀರೋ ಶಾಡೋ ಡೇ "ಶೂನ್ಯ ನೆರಳಿನ ವಿದ್ಯಮಾನವು ಕಂಡುಬಂದಿತು. ಸೂರ್ಯನು ಉತ್ತರಾಯಣದಿಂದ ದಕ್ಷಿಣಾಯನಕ್ಕೆ ಹಾಗೂ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಹೋಗುವ ವೇಳೆ ಮಾತ್ರ ಈ ವಿದ್ಯಮಾನವನ್ನು ಕಾಣಬಹುದು.
ಭೂಮಿಯು ಸೂರ್ಯನಿಗೆ ಪ್ರದಕ್ಷಿಣೆ ಹಾಕುತ್ತ 23.5 ಡಿಗ್ರಿ ದಕ್ಷಿಣ ಆಕ್ಷಾಂಶ ಮತ್ತು 23.5 ಡಿಗ್ರಿ ಉತ್ತರ ರೇಖಾಂಶಗಳ ನಡುವೆ ಹಾದು ಹೋಗುತ್ತದೆ. ಆಗ ಭೂಮಿಯಲ್ಲಿ ನೆರಳು ಗೋಚರಿಸುವುದಿಲ್ಲ.
ಕಕರ್ಾಟಕ ವೃತ್ತ ಮತ್ತು ಮಕರ ಸಂಕ್ರಾತಿ ವೃತ್ತದ ನಡುವೆ ಇರುವ ಪ್ರದೇಶಗಳಲ್ಲಿ ಪ್ರತಿ ವರ್ಷವು ಎರಡು ಬಾರಿ ಈ ವಿದ್ಯಮಾನವನ್ನು ಕಾಣಬಹುದಾಗಿದೆ. ಆದರಂತೆ ಈ ವರ್ಷ ಮೊದಲನೆಯದಾಗಿ ಮೇ 1 ರಂದು ಕಂಡುಬಂದಿತು, ಮತ್ತೊಮ್ಮೆ ಆಗಸ್ಟ್ 9 ರಂದು ಮಧ್ಯಾಹ್ನ 12.28 ನಿಮಿಷಕ್ಕೆ ಈ ರೀತಿಯ ಶೂನ್ಯ ನೆರಳಿನ ವಿದ್ಯಮಾನವನ್ನು ಕಾಣಬಹುದು ಎಂದು ಅವರು ಹೇಳಿದ್ದಾರೆ.
ವಿಜ್ಞಾನ ತಂತ್ರಜ್ಞಾನದ ಯಾವುದೇ ಕುತೂಹಲಗಳಿದ್ದರೂ ಅವುಗಳನ್ನು ಬಳ್ಳಾರಿಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಪ್ರಾತ್ಯಕ್ಷಿಕೆ ಮಾಡಿ ವಿದ್ಯಾಥರ್ಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ತೋರಿಸಲಾಗುತ್ತದೆ ಎಂದು ವಿಜ್ಞಾನ ಕೇಂದ್ರದ ಕ್ಯುರೇಟರ್ ಜಿ.ವಿ ಶಿವರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 