ಸಿನಿಮೀಯ ರೀತಿಯಲ್ಲಿ ಎಟಿಎಂ ಕಳ್ಳತನಕ್ಕೆ ಯತ್ನಿಸಿದ ಇಬ್ಬರ ಬಂಧನ
ಬೆಂಗಳೂರು, ಜ 27,ಸಿನಿಮೀಯ ರೀತಿಯಲ್ಲಿ ಸಿಸಿಟಿವಿಗೆ ಚೂಯಿಂಗ್ ಗಮ್ ಅಂಟಿಸಿ ಎಟಿಎಂ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.ಹರಿಯಾಣ ಮೂಲದ ಹರ್ಷಾ ಹಾಗೂ ಸುರಬ್ಜಿತ್ ಬಂಧಿತ ಆರೋಪಿಗಳು. ಬಂಧಿತರು ಬ್ಯಾಟರಾಯನಪುರದ ಮೈಸೂರು ರಸ್ತೆಯಲ್ಲಿರುವ ಎಸ್ ಬಿಐ ಎಟಿಎಂ ನಲ್ಲಿ ಹಣ ಕಳ್ಳತನ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ಶೆಟ್ಟರ್ ಬಾಗಿಲು ಮುಚ್ಚಿ ಸಿಸಿಟಿವಿಗೆ ಚೂಯಿಂಗ್ ಗಮ್ ಅಂಟಿಸಿ, ಎಟಿಎಂ ಕಿಯೋಸ್ಕ್ ಒಳಗೆ ಇದ್ದ ಸಿಸಿಟಿವಿ ವೈಯರ್ ಕಟ್ ಮಾಡಿದ್ದರು. ವೈಯರ್ ಕಟ್ ಮಾಡುತ್ತಿದ್ದಂತೆ ಮುಂಬೈನಲ್ಲಿನ ಎಸ್ಬಿಐ ಪ್ರಧಾನ ಕಚೇರಿಗೆ ಅಲಾರಂ ಮುಖಾಂತರ ಮೆಸೇಜ್ ವೊಂದು ರವಾನೆಯಾಗಿದೆ.
ತಕ್ಷಣವೇ ಎಸ್ಬಿಐ ಸಿಬ್ಬಂದಿ ಮುಂಬೈನಿಂದ ಬೆಂಗಳೂರು ಪೊಲೀಸ್ ಕಂಟ್ರೋಲ್ ರೂಮ್ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಕಂಟ್ರೋಲ್ ರೂಮ್ನಿಂದ ಬ್ಯಾಟರಾಯನಪುರ ಪೊಲೀಸರಿಗೆ ಎಟಿಎಂ ಕಳ್ಳತನಕ್ಕೆ ಯತ್ನ ನಡೆಯುತ್ತಿದೆ ಎಂಬ ಮಾಹಿತಿ ಲಭಿಸಿದೆ.ತಕ್ಷಣ ಇನ್ಸ್ಪೆಕ್ಟರ್ ಲಿಂಗರಾಜ್ ಹಾಗೂ ಕ್ರೈಂ ತಂಡ, ಎಟಿಎಂ ಇದ್ದ ಸ್ಥಳಕ್ಕೆ ತೆರಳಿದಾಗ, ಹೊರಗಿನಿಂದ ಎಟಿಎಂ ಶೆಟರ್ ಲಾಕ್ ಆಗಿದ್ದು ಕಂಡುಬಂದಿದೆ. ಬಳಿಕ ಕೆಲ ಕಾಲ ಅಲ್ಲೆ ಇದ್ದು ಪೊಲೀಸರು ಕೈಯಲ್ಲಿ ಲಾಕ್ ಟಚ್ ಮಾಡಿದಾಗ ಎಟಿಎಂ ಲಾಕ್ ಓಪನ್ ಆಗಿದೆ. ಈ ವೇಳೆ ಕಳ್ಳರು ಒಳಗೆ ಇರುವುದನ್ನು ದೃಢಪಡಿಸಿಕೊಂಡ ಪೊಲೀಸರು, ಹೆಚ್ಚಿನ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡು ಕೇವಲ ಐದು ನಿಮಿಷದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಹಣ ಕದಿಯಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 100 ಕೆ.ಜಿಯ ಗ್ಯಾಸ್ ಕಟರ್ ಹಾಗೂ ಸ್ಕ್ರೂ ಡ್ರೈವರ್, ಫೆನ್ಸಿಂಗ್ ಕಟ್ ಮಾಡುವ ಕಟರ್ ಸೇರಿ ಕೃತ್ಯಕ್ಕೆ ಬಳಸಿದ ಕಾರ್ ಹಾಗೂ ಬೈಕ್ ವಶಪಡಿಸಿಕೊಂಡಿದ್ದಾರೆ.ಸದ್ಯ ಸಿಕ್ಕಿಬಿದ್ದಿರುವ ಅರೋಪಿಗಳು ಬೆಂಗಳೂರಿನಲ್ಲಿ ನಾಲ್ಕು ಕಡೆ ಎಟಿಎಂಗಳಲ್ಲಿ ಕಳ್ಳತನ ಮಾಡಿದದರು. ಸದ್ಯ ಐದನೇ ಬಾರಿ ಎಟಿಎಂ ದರೋಡೆ ಹಾಕುವಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 