ವಿಕಲಚೇತನರಿಗೆ ಸರಕಾರಿ ಸೌಲಭ್ಯಗಳ ಲಾಭ ಸಿಗಲಿ : ಮಣ್ಣಿಕೇರಿ
ಲೋಕದರ್ಶನ ವರದಿ
ಬೆಳಗಾವಿ 4: ವಿಕಲಚೇತನ ಮಕ್ಕಳಿಗಾಗಿ ಸಕರ್ಾರ ಗೃಹಾಧಾರಿತ ಶಿಕ್ಷಣ, ಸ್ಕೂಲ್ ರೇಡಿನೆಸ್ ಪ್ರೋಗ್ರಾಂ, ದೈನಂದಿನ ಕೌಶಲ್ಯ ಮುಂತಾದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ವಿಕಲಚೇತನ ಮಕ್ಕಳಿಗೆ ಇದರ ಲಾಭ ಸಿಗುವಂತೆ ನಾವೆಲ್ಲರೂ ಪ್ರಯತ್ನಿಸಬೇಕು ಎಂದು ಜಿಲ್ಲಾ ಡೈಟ ಪ್ರಾಚಾರ್ಯ ಗಜಾನನ ಮಣ್ಣಿಕೇರಿ ನುಡಿದರು.
ಅವರು ಸೋಮವಾರ ದಿ. 3 ರಂದು ವಿಶ್ವ ವಿಕಲಚೇತನ ದಿನಾಚರಣೆ ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿದ್ದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಾ. ಸವಣೂರ, ಉದಯ ಹುನಕುಪ್ಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಡಿ. ಬಡಿಗೇರ, ಸಮನ್ವಯಾಧಿಕಾರಿ ರಾಜಶೇಖರ ಚಳಗೇರಿ ದೀಪ ಪ್ರಜ್ವಲಿಸಿದರು.
ವಿಶ್ವ ವಿಕಲಚೇತನ ದಿನಾಚರಣೆ ನಿಮಿತ್ತ ವಿಶ್ವೇಶ್ವರಯ್ಯ ನಗರದ ಸರಕಾರಿ ಕನ್ನಡ ಶಾಲೆಯ ಮೈದಾನದಲ್ಲಿ ವಿಕಲಚೇತನ ಮಕ್ಕಳು ಹಾಗೂ ಪಾಲಕರಿಗಾಗಿ ಕ್ರೀಡಾ ಸ್ಪಧರ್ೆಗಳನ್ನು ಏರ್ಪಡಿಸಲಾಗಿತ್ತು.
ಲಿಂಬೂ ಚಮಚ, ಮಡಿಕೆ ಒಡೆಯುವುದು, ಓಟ, ಕಪ್ಪೆ ಜಿಗಿತ ಮುಂತಾದ ಸ್ಪಧರ್ೆಗಳಲ್ಲಿ ನಗರದ ವಿವಿಧ ಶಾಲೆಗಳ 100ಕ್ಕೂ ಹೆಚ್ಚು ವಿದ್ಯಾಥರ್ಿಗಳು ಹಾಗೂ ಪಾಲಕರು ಪಾಲ್ಗೊಂಡಿದ್ದರು.
ಬಿಆರ್ ಟಿ, ಸಿಆರ್ ಪಿ, ಐಇಆಟರ್ಿಗಳಾದ ಅಶೋಕ ಅಯಾಚಿತ, ಎಸ್. ಬಿ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 