ಯೋಗದಿಂದ ದೇಹ-ಮನಸ್ಸು ಪರಿಶುದ್ಧ
ಲೋಕದರ್ಶನ ವರದಿ
ಯರಗಟ್ಟಿ 04: ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಯೋಗಾಸನ ಹಾಗೂ ವ್ಯಾಯಾಮ ಮಾಡುವುದರಿಂದ ದೇಹ ಸದೃಡಗೊಂಡು ಮನಸ್ಸು ಪರಶುದ್ದವಾಗಿರುತ್ತದೆ ಎಂದು ಸಿ.ಎಮ್.ಮಾಮನಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ಈರಣ್ಣ ಬೂಸ್ಥಳಿ ಹೇಳಿದರು.
ಇಲ್ಲಿನ ಮಾಮನಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ ಜಾನಪದ ಕಲಾ ಪೋಷಕ ಸಂಘ ತಾವಲಗೇರಿ, ಸಿ. ಎಮ್. ಮಾಮನಿ ಸರಕಾರಿ ಪ್ರಥಮ ದಜರ್ೆ ಕಾಲೇಜು, ಯರಗಟ್ಟಿ ಹಾಗೂ ನೆಹರು ಯುವ ಕೇಂದ್ರ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಾ.3 ರಂದು ಶಾಂತಿ-ಐಕ್ಯತೆಗಾಗಿ ಯೋಗ ಎಂಬ ಧ್ಯೇಯವಾಕ್ಯದೊಂದಿಗೆ ನೆರೆ ಹೊರೆ ಯುವ ಸಂಸತ್ತು ಕಾರ್ಯಕ್ರಮ 2019-20 ಮತ್ತು 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೆಹರು ಯುವ ಕೇಂದ್ರ ಬೆಳಗಾವಿ ಜಿಲ್ಲಾ ಯುವ ಸಮನ್ವಯಾಧಿಕಾರಿ ಮಾತನಾಡಿ ಯುವಕ-ಯುವತಿಯರು ನಿರಂತರ ಅದ್ಯಯನದ ಮೂಲಕ ಯಶಸ್ಸು ಸಾದಿಸಬಹುದು ಎಂದರು.
ಗ್ರಾ.ಪಂ.ಅಧ್ಯಕ್ಷೆ ಕಸ್ತೂರಿ ಕಡೆಮನಿ ಕಾರ್ಯಕ್ರಮ ಉದ್ಘಾಟಿಸಿದರು, ಯುಥ್ ರೆಡ್ ಕ್ರಾಸ್ ಸಂಚಾಲಕ ಶಿದ್ಲಿಂಗಪ್ಪ ಗಾಳಿ ಪ್ರಾಸ್ತಾವಿಕ ಮಾತನಾಡಿದರು. ಗ್ರಾ.ಪಂ. ಅಧ್ಯಕ್ಷೆ ಮಹಾದೇವಿ ಫ. ಖಂಡ್ರಿ, ಡಾ. ಮಹಾಂತೇಶ ಹಿರೇಮಠ, ಆರ್. ಆರ್. ಮುತಾಲಿಕ ದೇಸಾಯಿ, ಎಮ್ ಆರ್ ತಳವಾರ, ಮಂಜುನಾಥ್ ಸಿಂಗನ್ನವರ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ಬಿ. ಆರ್. ಅಂಬೇಡ್ಕರ ಜಾನಪದ ಕಲಾ ಪೋಷಕ ಸಂಘ ತಾವಲಗೇರಿ ಅಧ್ಯಕ್ಷ ಬಸವರಾಜ ಹರಿಜನ ನಿರೂಪಿಸಿದರು, ರಾಷ್ಟ್ರೀಯ ಸ್ವಯಂ ಸೇವಕ ಮಹಾದೇವ ಮುರುಗೋಡ ವಂದಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 