ನ.27 ರಂದು ಬಿ.ಎಸ್.ಗವಿಮಠ ಸಂಪಾದಿತ ‘ಬೆಳಗಾವಿ ಒಂದು ಅಧ್ಯಯನ’ ಗ್ರಂಥ ಲೋಕಾರ್ಪಣೆ
The book 'Belgaavi: A Study' edited by B.S. Gavimath was launched on November 27th.
ಬೆಳಗಾವಿ 24: ನಗರದ ಹಿರಿಯ ಸಾಹಿತಿ, ಕೆಎಲ್ಇ ಇತಿಹಾಸಕಾರ, ಶಿಕ್ಷಣತಜ್ಞ, ಪ್ರಾ.ಬಿ.ಎಸ್.ಗವಿಮಠ ರ 54ನೇ ಕೃತಿ ನವೆಂಬರ್ 27 ರಂದು ಲೋಕಾರ್ಪಣೆಗೊಳ್ಳಲಿದೆ.
ಕನ್ನಡ ಸಾಹಿತ್ಯ ಭವನ, ಜನಸಾಹಿತ್ಯ ಪೀಠ ಹಾಗೂ ಎಸ್.ಡಿ.ಇಂಚಲ ಹಾಗೂ ಉಳವೀಶ ಹುಲೆಪ್ಪನವರಮಠ ಇವರ ಸಹಯೋಗದಲ್ಲಿ ಕಾರ್ಯಕ್ರಮವು ಚನ್ನಮ್ಮ ಸರ್ಕಲ್ನ ಕನ್ನಡ ಸಾಹಿತ್ಯ ಭವನದಲ್ಲಿ ಅಂದು ಸಂಜೆ 4 ಗಂಟೆಗೆ ನಡೆಯಲಿದೆ. ಅಧ್ಯಕ್ಷತೆಯನ್ನು ಖ್ಯಾತವೈದ್ಯ ಡಾ.ಎಚ್.ಬಿ.ರಾಜಶೇಖರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಖ್ಯಾತ ನ್ಯಾಯವಾದಿ ಎಸ್.ಎಂ.ಕುಲಕರ್ಣಿ ಆಗಮಿಸಲಿದ್ದಾರೆ. ಬೆಳಗಾವಿ ವಿಭಾಗದ ನಿವೃತ್ತ ಕಮೀಶ್ನರ್ ಮಹಾಂತೇಶ ಹಿರೇಮಠ(ಐಎಎಸ್.ನಿ) ಇವರು ಪುಸ್ತಕ ಲೋಕಾರೆ್ಣಗೊಳಿಸಲಿದ್ದಾರೆ.
ಕೃತಿಯ ಕುರಿತು ಖ್ಯಾತ ವಾಗ್ಮಿ ಡಾ.ವಿ.ಎಸ್.ಮಾಳಿ ಹಾಗೂ ಲಿಂಗರಾಜ ಕಾಲೇಜಿನ ನಿವೃತ್ತ ಇಂಗ್ಲೀಷ ಪ್ರಾಧ್ಯಾಪಕಿ ಡಾ.ಗುರುದೇವಿ ಹುಲೆಪ್ಪನವರಮಠ ಮಾತನಾಡಲಿದ್ದಾರೆ ಎಂದು ಸಂಘಟಕರಾದ ಬಸವರಾಜ ಗಾರ್ಗಿ, ರಾಮಚಂದ್ರ ಕಟ್ಟಿ, ಹಾಗೂ ಡಾ.ಮಹೇಶ ಗುರನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 