ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದೆ; ಧ್ವೇಷಗಳನ್ನು ಬಿಟ್ಟು ಬಿಜೆಪಿ ಸೋಲಿಸಲು ಕೆಲಸ ಮಾಡಿ: ಸಿಎಂ ಕರೆ
ಬೆಂಗಳೂರು 16: ಐದು ಕ್ಷೇತ್ರಗಳ ಉಪ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ವಯಕ್ತಿಕ ಧ್ವೇಷಗಳನ್ನು ಬದಿಗಿಟ್ಟು ಬಿಜೆಪಿ ಸೋಲಿಸುವ ನಿಟ್ಟಿನಲ್ಲಿ ಕೆಲಸಮಾಡುವಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಕರೆ ನೀಡಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಸಿಎಂ ಕುಮಾರ ಸ್ವಾಮಿ, ಶಿವಮೊಗ್ಗ ಕ್ಷೇತ್ರಕ್ಕೆ ಜೆಡಿಎಸ್- ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹೀಗಾಗಿ ವಯಕ್ತಿಕ ದ್ವೇಷವನ್ನು ಬದಿಗೊತ್ತಿ ಬಿಜೆಪಿ ವಿರುದ್ಧ ಕೆಲಸ ಮಾಡಬೇಕೆಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ತಿಳಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿಯಿಂದ ಯಡಿಯೂರಪ್ಪ ಪುತ್ರ ಬಿ ವೈ ರಾಘವೇಂದ್ರ ಕಣದಲ್ಲಿದ್ದು, ಅವರನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾಳೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ, ವಿಧಾನಸಭೆ ಚುನಾವಣೆ ನಂತರ ಕೆಲ ದಿನಗಳ ಕಾಲ ಬೇಸರವಾಗಿತ್ತು, ಆದರೆ ನನ್ನ ತಂದೆಯೇ ಚುನಾವಣೆಯಲ್ಲಿ ಸೋತಿದ್ದರು, ಅದನ್ನೆಲ್ಲವನ್ನು ನಾವು ಮರೆತಿದ್ದೇವೆ ಈಗ ಈ ಚುನಾವನೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 