ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದೆ; ಧ್ವೇಷಗಳನ್ನು ಬಿಟ್ಟು ಬಿಜೆಪಿ ಸೋಲಿಸಲು ಕೆಲಸ ಮಾಡಿ: ಸಿಎಂ ಕರೆ
ಬೆಂಗಳೂರು 16: ಐದು ಕ್ಷೇತ್ರಗಳ ಉಪ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ವಯಕ್ತಿಕ ಧ್ವೇಷಗಳನ್ನು ಬದಿಗಿಟ್ಟು ಬಿಜೆಪಿ ಸೋಲಿಸುವ ನಿಟ್ಟಿನಲ್ಲಿ ಕೆಲಸಮಾಡುವಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಕರೆ ನೀಡಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಸಿಎಂ ಕುಮಾರ ಸ್ವಾಮಿ, ಶಿವಮೊಗ್ಗ ಕ್ಷೇತ್ರಕ್ಕೆ ಜೆಡಿಎಸ್- ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹೀಗಾಗಿ ವಯಕ್ತಿಕ ದ್ವೇಷವನ್ನು ಬದಿಗೊತ್ತಿ ಬಿಜೆಪಿ ವಿರುದ್ಧ ಕೆಲಸ ಮಾಡಬೇಕೆಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ತಿಳಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿಯಿಂದ ಯಡಿಯೂರಪ್ಪ ಪುತ್ರ ಬಿ ವೈ ರಾಘವೇಂದ್ರ ಕಣದಲ್ಲಿದ್ದು, ಅವರನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾಳೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ, ವಿಧಾನಸಭೆ ಚುನಾವಣೆ ನಂತರ ಕೆಲ ದಿನಗಳ ಕಾಲ ಬೇಸರವಾಗಿತ್ತು, ಆದರೆ ನನ್ನ ತಂದೆಯೇ ಚುನಾವಣೆಯಲ್ಲಿ ಸೋತಿದ್ದರು, ಅದನ್ನೆಲ್ಲವನ್ನು ನಾವು ಮರೆತಿದ್ದೇವೆ ಈಗ ಈ ಚುನಾವನೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 