ಮನಮೋಹನ್ ಸಿಂಗ್ ಅವರಿಗೆ ನೀಡಿದ್ದ ಎಸ್ಪಿಜಿ ಭದ್ರತೆ ಹಿಂಪಡೆದ ಕೇಂದ್ರ ಸರ್ಕಾರ
ನವದೆಹಲಿ, ಆ 26 ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಿದ್ದ ಎಸ್ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ.
ಇದೇ ವೇಳೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರಿಗೆ ನೀಡಿದ್ದ ಭದ್ರತೆಯನ್ನೂ ಹಿಂಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೇಶದ ಪ್ರಧಾನ ಮಂತ್ರಿ ಮತ್ತು ಮಾಜಿ ಪ್ರಧಾನಮಂತ್ರಿಗಳು ಮತ್ತು ಅತಿ ಗಣ್ಯರಿಗೆ ಒದಗಿಸಲಾಗುವ ವಿಶೇಷ ರಕ್ಷಣಾ ಗುಂಪು (ಎಸ್ಪಿಜಿ) ಭದ್ರತೆಯನ್ನು ಎಲ್ಲಾ ಏಜೆನ್ಸಿಗಳ ಪರಾಮರ್ಶಿ ಮತ್ತು ಮೌಲ್ಯಮಾಪನದ ನಂತರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ಹಿಂಪಡೆಯಲಾಗಿದೆ.
ಪ್ರಸ್ತುತ ಭದ್ರತಾ ಪರಿಶೀಲನೆಯನ್ನು ಕಾಲಕಾಲಕ್ಕೆ ನಡೆಸಲಾಗುತ್ತದೆ. ಗಣ್ಯ ವ್ಯಕ್ತಿಗಳಿಗೆ ಬೆದರಿಕೆ ಇರುವುದನ್ನು ಗ್ರಹಿಸಿ ಭದ್ರತೆಯನ್ನು ಮುಂದುವರಿಸಲಾಗುತ್ತದೆ. ಇದೊಂದು ವೃತ್ತಿಪರ ಮೌಲ್ಯಮಾಪನವನ್ನು ಆಧರಿಸಿ ನಡೆಯುವ ಪ್ರಕ್ರಿಯೆಯಾಗಿದೆ. ಡಾ. ಮನಮೋಹನ್ ಸಿಂಗ್ ಅವರಿಗೆ ಝಡ್ + ಭದ್ರತೆ ಮುಂದುವರಿಯಲಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಸೋಮವಾರ ದೃಢಪಡಿಸಿದ್ದಾರೆ.
ಕೆಲವು ದಿನಗಳ ಹಿಂದೆಯೇ ದೇವೇಗೌಡ ಅವರಿಂದ ಎಸ್ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿತ್ತು.
3000ಕ್ಕೂ ಅಧಿಕ ಗಣ್ಯರಿಗೆ ನೀಡಲಾಗಿದ್ದ ಎಸ್ಪಿಜಿ ಭದ್ರತೆ, ಈಗ ಪ್ರಧಾನಿ ನರೇಂದ್ರ ಮೋದಿ ಮತ್ತು ಗಾಂಧಿ ಕುಟುಂಬದಲ್ಲಿ ಮಾತ್ರ ಉಳಿದಿದೆ.
1984ರ ಅಕ್ಟೋಬರ್ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ಎಸ್ಪಿಜಿಯನ್ನು 1985ರಲ್ಲಿ ಸ್ಥಾಪಿಸಲಾಗಿತ್ತು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 