ಅಕಾಲಿಕ ಆಲಿಕಲ್ಲು ಮಳೆಗೆ ಭತ್ತದ ಬೆಳೆ ಸಂಪೂರ್ಣ ನಾಶ
ಲೋಕದರ್ಶನ ವರದಿ
ಗಂಗಾವತಿ 08: ತಾಲ್ಲೂಕಿನಾದ್ಯಂತ ಸೋಮವಾರ ಸಂಜೆ ಸುರಿದ ಆಲಿಕಲ್ಲು ಮಳೆ ಗಾಳಿಗೆ ಬೆಳೆದು ನಿಂತ ಭತ್ತದ ಬೆಳೆ ಸಂಪೂರ್ಣವಾಗಿ ನೆಲಕ್ಕುರುಳಿದೆ. ಇದರಿಂದ ರೈತರ ಬದುಕು ಸಂಕಷ್ಟಕ್ಕೆ ಗುರಿಯಾಗಿದೆ. ಅಚ್ಚುಕಟ್ಟು ಪ್ರದೇಶದ 80 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ನಾಶವಾಗಿದ್ದು ಇದರಿಂದ ರೈತರಿಗೆ ಸಂಕಷ್ಟವುಂಟಾಗಿದೆ. ಈಗಾಗಲೇ ಕಟಾವಿಗೆ ಬಂದಿದ್ದ ಭತ್ತ ನಾಶವಾಗಿದೆ.
ಸಂಸದರು ಹಾಗೂ ಶಾಸಕರ ಭೇಟಿ: ಅಕಾಲಿಕ ಮಳೆಯಿಂದ ನೆಲಕ್ಕುರುಳಿದ ಭತ್ತದ ಗದ್ದೆ ಪ್ರದೇಶಕ್ಕೆ ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ ಬಿಜೆಪಿ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ ಮಾತನಾಡಿ ಅಕಾಲಿಕ ಮಳೆಯಿಂದ ರೈತರಿಗೆ ನಷ್ಟವುಂಟಾಗಿದ್ದು ಪ್ರತಿ ಎಕರೆ ಪರಿಹಾರ ನೀಡಬೇಕಿದ್ದು ಕಂದಾಯ ಕೃಷಿ ಇಲಾಖೆ ಜಂಟಿ ಸವರ್ೆ ನಡೆಸಿದ ನಂತರ ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರೈತಪರ ಹೋರಾಟಗಾರರಾದ ತಿಪ್ಪೇರುದ್ರಸ್ವಾಮಿ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷರಾದ ವಿರೂಪಾಕ್ಷಪ್ಪ ಸಿಂಗನಾಳ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷರಾದ ಚನ್ನಪ್ಪ ಮಳಿಗಿ ತಹಶಿಲ್ದಾರಾದ ಎಲ್.ಡಿ.ಚಂದ್ರಕಾಂತ ಮುಖಂಡರು ಸೇರಿದಂತೆ ಇತ್ತರರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 