ಕೊಲೆ ಯತ್ನದ ಅಪರಾಧಿಗೆ ಹತ್ತು ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ
The court sentenced the accused to ten years for attempted murder
ಕೊಲೆ ಯತ್ನದ ಅಪರಾಧಿಗೆ ಹತ್ತು ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ
ಕಾರವಾರ 14: ಕ್ಯಾಸಲರಾಕ್ ನಿವಾಸಿ ರಮೇಶ್ ಗುಂಡು ಪಾವಲೆ ಎಂಬಾತ ಸುಜಾತಾ ಪಾವಲೆ ಎಂಬ ಮಹಿಳೆಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿರಸಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಅಪರಾಧಿಗೆ ಹತ್ತು ವರ್ಷ ಸಾದಾ ಕಾರಗೃಹ ಶಿಕ್ಷೆ ವಿಧಿಸಿದ್ದಾರೆ.
ಶುಕ್ರವಾರ ಈ ತೀರ್ು ಬಂದಿದೆ.ಕೊಲೆ ಆರೋಪಿ ರಮೇಶ್ ಪಾವಲೆಗೆ ಹತ್ತು ವರ್ಷ ಸಾದಾ ಕಾರಾಗೃಹ ಶಿಕ್ಷೆ ಜೊತೆಗೆ 19 ಸಾವಿರ ದಂಡ ಹಾಗೂ ಸಂತ್ರಸ್ತೆ ಸುಜಾತಾಗೆ 10 ಸಾವಿರ ನೀಡಲು ನ್ಯಾಯಾಧೀಶ ಕಿರಣ್ ಕಿಣಿ ಆದೇಶ ನೀಡಿದ್ದಾರೆ. ಅಲ್ಲದೆ ಸುಜಾತ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಹೆಚ್ಚಿನ ನೆರವು ಪಡೆಯಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.29 ಮೇ 2020 ರಂದು ಕ್ಯಾಸರಾಕ್ (ಜೊಯಿಡಾ)ದ ಮಾರ್ಕೆಟ್ ರಸ್ತೆಯಲ್ಲಿ ಆಸ್ತಿ ವಿವಾದ ಕಾರಣಕ್ಕೆ ಸುಜಾತ ಮೇಲೆ ಕೊಲೆ ಯತ್ನ ನಡೆದಿತ್ತು. ದೇವಿದಾಸ ಪಾವಲೆ ಹುಡುಕುತ್ತಾ ಬಂದ ರಮೇಶ್ ಪಾವಲೆ ಸುಜಾತಾ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕಾರ್ ನಲ್ಲಿ ಪರಾರಿಯಾಗಿದ್ದ. ಈ ಘಟನೆ ಸಂಬಂದ ರಮನಗರ ಪಿಎಸ್ ಐ ಕಿರಣ್ ಪಾಟೀಲ್ ನ್ಯಾಯಾಲಯಕ್ಕೆ ಚಾರ್ಜ ಶೀಟ್ ಹಾಕಿದ್ದರು. ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ್ ಎಮ್ .ಮಳಗೀಕರ್ ಸಮರ್ಥ ವಾದ ಮಂಡಿಸಿದ್ದರು......
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 