ಈ ದಿನ 28 ವರ್ಷಗಳ ಬಳಿಕ ಭಾರತ ವಿಶ್ವಕಪ್ ಗೆದ್ದ ಸುದಿನ
ಮುಂಬಯಿ, ಏ 2, ಧೋನಿ
ಅವರ ಫಿನಿಶಿಂಗ್ ಸ್ಟೈಲ್ ಮತ್ತು ಕಿಕ್ಕಿರಿದು ತುಂಬಿದ ಜನ ಸಾಗರದ ಮುಂದೆ ಟೀಮ್ ಇಂಡಿಯಾ
28 ವರ್ಷಗಳ ನಂತರ ಐಸಿಸಿ ಏಕದಿನ ವಿಶ್ವ ಕಪ್ ಅನ್ನು ಮುಡಿಗೇರಿಸಿಕೊಂಡಿತು. ಮುಂಬೈನ
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾದ ವೇಗಿ ನುವಾನ್
ಕುಲಸೇಕರ ಬೌಲಿಂಗ್ ನಲ್ಲಿ ಸಿಕ್ಸರ್ ಬಾರಿಸುವುದರೊಂದಿಗೆ ಮಹೇಂದ್ರ ಸಿಂಗ್ ಧೋನಿ
ಸಾರಥ್ಯದ ಭಾರತ ತಂಡ, 2011ರ ವಿಶ್ವ ಕಪ್ ಗೆದ್ದುಕೊಂಡಿತು ಎಂದು ಅಂದು ವೀಕ್ಷಕ
ವಿವರಣೆಗಾರರಾಗಿದ್ದ ರವಿಶಾಸ್ತ್ರಿ ಹೇಳುತ್ತಿದ್ದಂತೆಯೇ ಲಕ್ಷಾಂತರ ಕ್ರೀಡಾಭಿಮಾನಿಗಳ
ಕಿವಿ ನೆಟ್ಟಿಗಾಗಿತ್ತು.ಹೌದು.. ಭಾರತ ತಂಡ ಎರಡನೇ ವಿಶ್ವಕಪ್ ಗೆದ್ದ ಸುದಿನ
ಇಂದು. 1983ರಲ್ಲಿ ಕಪಿಲ್ ದೇವ್ ನೇತೃತ್ವದ ಭಾರತ ತಂಡ, ಮೊದಲ ಬಾರಿ ಏಕದಿನ ವಿಶ್ವಕಪ್
ಮುಡಿಗೇರಿಸಿತೊಂಡಿತ್ತು. ಆನಂತರ ಭಾರತ ಪ್ರಶಸ್ತಿ ಗೆಲ್ಲಲು ನಡೆಸಿದ ಯತ್ನಗಳೆಲ್ಲವೂ
ವಿಫಲಗೊಂಡಿದ್ದವು. ಆದರೆ ಧೋನಿ ಸಾರಥ್ಯದ ಟೀಮ್ ಇಂಡಿಯಾ 28 ವರ್ಷಗಳ ನಂತರ ವಿಶ್ವಕಪ್
ಗೆದ್ದು ಸಚಿನ್ ತೆಂಡೂಲ್ಕರ್ ಗೆ ಅರ್ಪಿಸಿತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 