ಮಹಿಳಾ ತಹಶೀಲ್ದಾರ್ ವಿಜಯಾರೆಡ್ಡಿ ಜೀವಂತ ದಹಿಸಿ ಕೊಂದಿದ್ದ ಆರೋಪಿ ಸಾವು
ಹೈದರಾಬಾದ್, ನ 7: ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾಪುರಮೇಟ್ ಮಹಿಳಾ ತಹಶೀಲ್ದಾರ್ ವಿಜಯಾರೆಡ್ಡಿ ಅವರ ಕಚೇರಿಗೆ ಹಾಡುಹಗಲೇ ನುಗ್ಗಿ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಜೀವಂತವಾಗಿ ಹತ್ಯೆಮಾಡಿದ್ದ, ಕುಕೃತ್ಯ ವೇಳೆ ತಾನು ಗಾಯಗೊಂಡಿದ್ದ ಆರೋಪಿ ಕುರ್ರಾ ಸುರೇಶ್ ಉಸ್ಮಾನಿಯಾ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ಘಟನೆಯ ವೇಳೆ ಶೇ. 65ರಷ್ಟು ಗಾಯಗೊಂಡಿದ್ದ ಆತನನ್ನು ಉಸ್ಮಾನಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಆತ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ತಹಶೀಲ್ದಾರ್ ಅವರನ್ನು ರಕ್ಷಿಸಲು ಮುಂದಾಗಿ ಶೇ 80ರಷ್ಟು ಗಾಯಗೊಂಡಿದ್ದ ವಾಹನ ಚಾಲಕ ಗುರುನಾಥಂ ಅವರೂ ಸಹ ಚಿಕಿತ್ಸೆಯ ವೇಳೆ ಮೃತಪಟ್ಟಿದ್ದರು. ಘಟನೆಯ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಅಡೆಂಡರ್ ಚಂದ್ರಯ್ಯ ಎಂಬುವರು ಉಸ್ಮಾನಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 