ಗುರುವಿನ ಗೌರವ ಹೆಚ್ಚಿಸಿದ ಶಿಷ್ಯರ ಗುರುಭಕ್ತಿ ಅಭಿನಂದನಾರ್ಹ: ಅರಕೇರಿ
The devotion of the disciples, which increased the respect of the Guru, is commendable: Arakeri
ಮಹಾಲಿಂಗಪುರ 20: ಗುರುವಿನ ಸ್ಥಾನ ನೀಡಿ ಗೌರವ ಹೆಚ್ಚಿಸಿದ ಶಿಷ್ಯರ ಗುರುಭಕ್ತಿ ಮೆಚ್ಚುವಂತಹದ್ದು ಎಂದು ಸ್ಥಳೀಯ ಎಸ್ಸಿಪಿ ಪ್ರೌಢಶಾಲೆಯ ಉಪಪ್ರಾಂಶುಪಾಲ ಬಿ.ಎನ್.ಅರಕೇರಿ ಹೇಳಿದರು.
ಇಲ್ಲಿನ ಎಸ್ಸಿಪಿ ಪ್ರೌಢಶಾಲೆಯಲ್ಲಿ 2006-07ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪಾಸಾದ ವಿದ್ಯಾರ್ಥಿಗಳು ಭಾನುವಾರ ಮೇ.18 ರಂದು ಹಮ್ಮಿಕೊಂಡಿದ್ದ ಗುರುವಂದನೆ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉಳಿದೆಲ್ಲ ಶಿಕ್ಷಕರು ಮಾತನಾಡಿ, ಕಲಿತ ಶಾಲೆ ಮತ್ತು ಕಲಿಸಿದ ಗುರುಗಳನ್ನು 18 ವರ್ಷಗಳ ನಂತರ ನೆನೆದು ಎಲ್ಲರನ್ನೂ ಸನ್ಮಾನಿಸುವ ಗುರುಭಕ್ತಿ ಶ್ಲಾಘನೀಯ ಎಂದರು.
ಇದಕ್ಕೂ ಮುನ್ನ ವಿದ್ಯಾರ್ಥಿಗಳು ನೆಲಕ್ಕೆ ಹೂವು ಹಾಸಿ ಇಕ್ಕೆಲಗಳಲ್ಲಿ ನಿಂತು ಎಲ್ಲ ಗುರುಗಳ ತಲೆ ಮೇಲೆ ಹೂಮಳೆಗರೆದು ವೇದಿಕೆಗೆ ಬರಮಾಡಿಕೊಂಡರು. ಹೂಗುಚ್ಚ ನೀಡಿ ಗೌರವಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ತಮ್ಮನ್ನು ಅಗಲಿದ ಶಿಕ್ಷಕರಾದ ಎಸ್.ಜಿ.ಜೀವಣಿ, ಸಿ.ಎಸ್.ಕೊಣ್ಣೂರ ಹಾಗೂ ಸಹಪಾಠಿಗಳಾದ ಶಿವಲೀಲಾ ಶಿರೋಳ, ಮಹಾಲಿಂಗ ಮಠಪತಿ ಅವರಿಗೆ ಮೌನ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸವಿತಾ ಕಂಬಾರ, ಮಾಲಾಶ್ರೀ ಉಪ್ಪಾರ ಪ್ರಾರ್ಥನೆ ಹಾಡಿದರು. ಪೂಜಾ ಶಿರೋಳ, ಅಶ್ವಿನಿ ಹುಡೇದಮನಿ ಸ್ವ್ವಾಗತ ಗೀತೆ ಹಾಡಿದರು. ಅಕ್ಷತಾ ಮುಧೋಳ ಪುಷ್ಾರೆ್ಪಣ ಮಾಡಿದರು. ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಅಶೋಕ ಅಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ಪೂಜಾ ಶಿರೋಳ, ಚೇತನ ಡೋಣಿ, ಪ್ರವೀಣ ಹೊಸಕೋಟಿ ಅನಿಸಿಕೆ ವ್ಯಕ್ತಪಡಿಸಿದರು.
ಗುರುಗಳಾದ ಎಸ್.ಬಿ.ಹುಲಕುಂದ, ಎಸ್.ಬಿ.ಕೋರಿಶೆಟ್ಟಿ, ಎಂ.ಐ.ಡಾಂಗೆ, ಬಿ.ಡಿ.ಗೋಕಾಕ, ಬಿ.ಎನ್.ಅರಕೇರಿ, ಆರ್.ಎಸ್.ಯರಗಾಣಿ, ಎಸ್.ಎಸ್.ಅನಿಗೋಳ, ಸಿ.ಎ.ಫಡತಾರೆ ಅವರನ್ನು ವಿದ್ಯಾರ್ಥಿಗಳು ಸನ್ಮಾನಿಸಿದರು.
ಗುರು-ಶಿಷ್ಯರು ಪರಸ್ಪರ ಗತಕಾಲದ ನೆನಪು ಮತ್ತು ಅನುಭವಗಳನ್ನು ಮೆಲಕು ಹಾಕಿದರು. ವಿದ್ಯಾರ್ಥಿಗಳು ಪ್ರತಿಯೊಬ್ಬ ಶಿಕ್ಷಕರಿಗೂ ಒಂದೊಂದು ಗಿಡ ನೀಡಿ ಅದು ಹಚ್ಚಹಸಿರಾಗಿರುವಂತೆ ಮತ್ತು ತಮ್ಮ ನೆನಪು ಕೂಡ ಹಸಿರಾಗಿರುವಂತೆ ಮನವಿ ಮಾಡಿದರು. ಎಲ್ಲ ಗುರುಶಿಷ್ಯರೊಂದಾಗಿ ಗ್ರುಫ್ ಫೋಟೋ ಮತ್ತು ಸೆಲ್ಫೀ ಫೋಟೋ ತೆಗೆಸಿಕೊಂಡರು. ನಂತರ ಎಲ್ಲರೂ ಜವಾರಿ ರೊಟ್ಟಿ, ಚಪಾತಿ, ಪನೀರ್ ಪಲ್ಯ, ಉಸಳಿ, ಮೊಸರು, ಚಟ್ನಿ, ಪ್ರ್ಯೂಟ್ ಸಲಾಡ್, ತರಕಾರಿ ಸಲಾಡ್, ಮಧುರಮಿಲನ್ ಸಿಹಿ ಖಾದ್ಯ, ಮಸಾಲೇ ಅನ್ನ, ಸಾರು, ಮಜ್ಜಿಗೆ ಊಟ ಸವಿದರು. ಮೊದಲು ಗುರುಗಳಿಗೆ ಉಣಬಡಿಸಿ ನಂತರ ತಾವು ಊಟ ಮಾಡಿದರು.
ಪ್ರವೀಣ ಸೋನಾರ, ವನಜಾ ಶಿವಣಗಿ, ಗೋಪಿನಾಥ ರೇಣಕೆ, ಅಕ್ಷತಾ ಮುಧೋಳ, ಶಿವು ಅಂಬಿ, ಪೂಜಾ ಶಿರೋಳ, ಮಾಲಾಶ್ರೀ ಉಪ್ಪಾರ, ಪ್ರವೀಣ ಹೊಸಕೋಟಿ ಸೇರಿದಂತೆ ಹಲವಾರು ಸಹಪಾಠಿಗಳು ಕಾರ್ಯಕ್ರಮ ಸಂಘಟಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 