ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮೊದಲ ಆದ್ಯತೆ: ಶಾಸಕ ಲಮಾಣಿ
ಲೋಕದರ್ಶನ ವರದಿ
ಶಿರಹಟ್ಟಿ 25: ಮತಕ್ಷೇತ್ರದದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮೀಣ ಪ್ರದೇಶಕ್ಕೆ ರಸ್ತೆ, ವಿದ್ಯುತ್, ನೀರು ಸೇರಿದಂತೆ ಮುಂತಾದ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದರ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ತಾಲೂಕಿನ ದೇವಿಹಾಳ, ರಣತೂರು, ಬೆಳ್ಳಟ್ಟಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಈ ಗ್ರಾಮದ ಜನರ ಬಹುದಿನದ ಬೇಡಿಕೆಯಾದ ಉತ್ತಮ ರಸ್ತೆಯ ಕಾಮಗಾರಿಯ ಕನಸು ನನಸಾಗುವ ಕಾಲ ಬಂದಿದೆ. ಪ್ರಸ್ತುತ ರಸ್ತೆಯು ಈ ಮೂರು ಗ್ರಾಮದ ನಡುವಿನ ಜನರಿಗೆ ಉತ್ತಮ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.
ಅಭಿವೃದ್ದಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಲೋಪದೋಷ ಹಾಗೂ ನಿಷ್ಕಾಳಜಿಗಳಿಗೆ ಆಸ್ಪದ ನೀಡದೆ ಪ್ರತಿಯೊಂದು ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಶಂಕರಪ್ಪ ಬಾಕರ್ಿ, ತಿಮ್ಮರಡ್ಡಿ ಅಳವಂಡಿ, ಹುಸೇನಸಾಬ ಬಳಿಗಾರ, ಶರೀಫಸಾಬ ಛಬ್ಬಿ, ಎಂ.ಎ. ಪಾಟೀಲ, ನಾಗಪ್ಪ ಕಾಶಣ್ಣವರ, ಪರಶುರಾಮ ಅಕ್ಕಮ್ಮನವರ, ಶಿವಾಜಿ ಲಮಾಣಿ, ಹುಸೇನಸಾಬ ನೀಲಗುಂದ, ಹಜರೇಸಾಬ ಬಿಜಕತ್ತಿ, ಆಭಿಯಂತರ ಎಂ.ಎ.ಪಟ್ಟಣಶೆಟ್ರ ಮುಂತಾದವರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 