ಜಾರ್ಖಂಡ್ ನಲ್ಲಿ ಮಹಾಮೈತ್ರಿ ಸರಕಾರ ರಚನೆ: ಸಂಜಯ್ ಪಾಸ್ವಾನ್
ನವದೆಹಲಿ, ನ 18 : ಖನಿಜ ಶ್ರೀಮಂತ ಜಾರ್ಖಂಡ್ ರಾಜ್ಯದಲ್ಲಿ ಈ ಬಾರಿ ಮಹಾಮೈತ್ರಿ ಸರಕಾರ ರಚನೆಯಾಗುವುದು ಖಚಿತ ಎಂದು ಜಾರ್ಖಂಡ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಂಜಯ್ ಪಾಸ್ವಾನ್ ಸೋಮವಾರ ಭವಿಷ್ಯ ನುಡಿದಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಜನರನ್ನು ಮರಳು ಮಾಡಿ ಕಾಲ ಹರಣ ಮಾಡಿದೆ ಎಂದು ಅವರು ದೂರಿದರು. ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಾದೇಶಿಕ ಪಕ್ಷವಾದ ಜಾರ್ಖಂಡ್ ಮುಕ್ತಿ ಮೋಚರ್ಾದಂತೆ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪಾಸ್ವಾನ್ ಈ ಅವರು ಈ ರೀತಿ ಉತ್ತರ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಯಾವತ್ತೂ ಮೈತ್ರಿಧರ್ಮ ಪಾಲಿಸಲಿದೆ ನಾವು(ಜೆಎಂಎಂ, ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳ) ಒಂದೇ ಸಿದ್ಧಾಂತದಲ್ಲಿ ನಂಬಿಕೆ ಹೊಂದಿದ್ಧೇವೆ ಎಂದು ಹೇಳಿದರು. ಐದು ಹಂತಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಈಗಾಗಲೆ ಬಿಜೆಪಿಗೆ ಸೋಲಿನ ಭೀತಿ ಆವರಿಸಿಕೊಂಡಿದೆ ಎಂದೂ ಪಾಸ್ವಾನ್ ತಿರುಗೆಟು ನೀಡಿದರು. . ರಾಜ್ಯದಿಂದ ನಕ್ಸಲೀಯ ಸಮಸ್ಯೆ ಬಗೆಹರಿಸುವುದಾಗಿ ಬಿಜೆಪಿ ಹೇಳಿತ್ತು. ಆದರೆ ಹೇಳಿದಂತೆ ನಡೆದುಕೊಂಡಿಲ್ಲ ಎಂದು ದೂರಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 