ಲಾಕ್ ಡೌನ್ ಇಡೀ ರಾಜ್ಯಕ್ಕೆ ವಿಸ್ತರಿಸಲು ಸರ್ಕಾರ ಚಿಂತನೆ
ಬೆಂಗಳೂರು, ಮಾ. 23, ಕೊರೋನಾ ಸೋಂಕು ಕಂಡುಬಂದ 9 ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ 'ಲಾಕ್ಡೌನ್' ತೀರ್ಮಾನಕ್ಕೆ ಜನರು ಅಸಡ್ಡೆ ತೋರಿದ ಹಿನ್ನೆಲೆಯಲ್ಲಿ ಈ ಆದೇಶ ಇಡೀ ರಾಜ್ಯಕ್ಕೆ ವಿಸ್ತರಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯ ಸರ್ಕಾರದ ಮಹತ್ವದ ತುರ್ತು ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದರು.ನಿನ್ನೆ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶಿಸಲಾಗಿತ್ತು. ಆದರೆ ಈ ಬಗ್ಗೆ ಜನರಿಂದ ಸರಿಯಾದ ಪ್ರತಿಕ್ರಿಯೆ ಹಾಗೂ ಜನರು ಎಚ್ಚೆತ್ತುಕೊಳ್ಳದ ಕಾರಣ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆಗೆ ಮುಂದಾಗಿದೆ.ಈ ಬಗ್ಗೆ ಇಂದು ಸಂಜೆ ಮತ್ತೊಂದು ಸಭೆ ಬಳಿಕ ಇಡೀ ರಾಜ್ಯಕ್ಕೆ ಲಾಕ್ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನಡೆಸುತ್ತೇವೆ. ಈಗಾಗಲೇ ಜನರ ಓಡಾಟ ಹೆಚ್ಚಾಗಿದೆ. ಇದು ನಮ್ಮ ಗಮನಕ್ಕೆ ಬಂದಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಹಾಗಾಗಿ ಸಂಜೆ ರಾಜ್ಯವೇ ಲಾಕ್ ಡೌನ್ ಮಾಡಿವ ಬಗ್ಗೆ ಸಭೆ ಸೇರಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 