ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಸರ್ಕಾರ ಮುಂದಾಗಿದೆ
The government is moving to issue permanent residence certificates to illegal immigrants
ಹೂವಿನಹಡಗಲಿ 12: ರಾಜ್ಯ ಸರ್ಕಾರವು ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಕುರಿತು ಹೊರಡಿಸಿರುವ ಅಧಿಸೂಚನೆ ಅಕ್ರಮ ವಲಸಿಗರಿಗೆ ರಕ್ಷಣೆ ನೀಡುವ ಪ್ರಯತ್ನವಾಗಿದೆ ಎಂದು ಶಾಸಕ ಕೃಷ್ಣ ನಾಯ್ಕ್ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿಶೇಷ ಪರೀಶೀಲನೆ (ಎಸ್ಐಆರ್) ಮೂಲಕ ಮತದಾರರ ಪಟ್ಟಿಯ ಸಮಗ್ರ ಪರೀಶೀಲನೆ ನಡೆಯುತ್ತಿರುವ ಸಂದರ್ಭದಲ್ಲಿ, ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಕ್ರಮ ಕೈಗೊಂಡಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಟೀಕಿಸಿದರು.
ಅಕ್ರಮ ವಲಸಿಗರಿಗೆ ಪಿಆರ್ಸಿ ನೀಡುವುದರಿಂದ ರಾಜ್ಯ ಹಾಗೂ ರಾಷ್ಟ್ರದ ಭದ್ರತೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ. ಈ ವಿಷಯದಲ್ಲಿ ಕೇಂದ್ರ ಗೃಹ ಸಚಿವಾಲಯ ಮಧ್ಯಪ್ರವೇಶಿಸಿ ದೇಶದ ಆಂತರಿಕ ಭದ್ರತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಸಂಜೀವ ರೆಡ್ಡಿ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ್, ಜಿಲ್ಲಾ ಉಪಾಧ್ಯಕ್ಷ ಇಟಿ. ಲಿಂಗರಾಜ್, ಹಣ್ಣಿ ಶಶಿಧರ್, ಮಂಜುನಾಥ್ ಜೈನ್, ಎಚ್. ಪೂಜಪ್ಪ, ಸಿ. ಮೋಹನ್ ರೆಡ್ಡಿ, ಟಿ. ಮಹಾಂತೇಶ್, ಕೊಡಿಹಳ್ಳಿ ಕೊಟ್ರೇಶ್, ವಾರದ ಗೌಸ್ ಮೊಹಿದ್ದೀನ್ ಹಾಗೂ ಪುನೀತ್ ದೊಡ್ಡಮನಿ ಉಪಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 