ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಯುವ ಸಮುದಾಯದ ಪಾತ್ರ ಮಹತ್ವ
ಲೋಕದರ್ಶನ ವರದಿ
ಘಟಪ್ರಭಾ 06: ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ಯುವ ಸಮುದಾಯದ ಪಾತ್ರ ಮಹತ್ವದಾಗಿದೆ ಎಂದು ಘಟಪ್ರಭಾದ ಕೆಎಚ್ಐ ಆಸ್ಪತ್ರೆಯ ವೈದ್ಯಾಧಿಕಾರಿ ಡಾ: ಸ್ವಾತಿ ವೈದ್ಯ ಹೇಳಿದರು.ಗುರುವಾರ ಇಲ್ಲಿಯ ಮಲ್ಲಾಪೂರ ಪಿಜಿ ಪಟ್ಟಣದ ಎಸ್.ವಾಯ್.ಖಾನಾಪೂರೆ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬೆಳಗಾವಿ ನೆಹರು ಯುವ ಕೇಂದ್ರ, ಜೈ ಹನುಮಾನ ಯುವಕ ಸಂಘ ಮಲ್ಲಾಪೂರ ಪಿಜಿ, ಎಸ್.ವಾಯ್.ಖಾನಾಪೂರೆ ಪದವಿ ಪೂರ್ವ ಮಹಾವಿದ್ಯಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ 'ನೆರೆ ಹೊರೆ ಯುವ ಸಂಸತ್ತು' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಯುವಕರು ಶಾರೀರಿಕವಾಗಿ ಸದೃಢ ಹೊಂದಬೇಕು. ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಜೊತೆಗೆ ಉತ್ತಮ ಪರಿಸರ ನಿರ್ಮಾಣ ಮಾಡಿ ಜನರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಭಾರತ ಸೇವಾದಳದ ಡೆಪ್ಯೋಟಿ ಬಸವರಾಜ ಹಟ್ಟಿಗೌಡರ ಉದ್ಘಾಟಿಸಿ ಮಾತನಾಡಿ ಯುವಕರೇ ದೇಶದ ಸಂಪತ್ತು. ಯುವ ಜನಾಂಗದಿಂದಲೆ ದೇಶದ ಅಭಿವೃದ್ದಿ ಸಾಧ್ಯ, ಸಮೃದ್ಧ ರಾಷ್ಟ್ರ ನಿಮರ್ಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಯುವ ಜನಾಂಗ ರಾಷ್ಟ್ರ ಮತ್ತು ದೇಶ ಪ್ರೇಮ ಬೆಳೆಸಿಕೊಳ್ಳಬೇಕು. ರಾಷ್ಟ್ರಕ್ಕಾಗಿ ಶ್ರಮಿಸಿದ ಮಹಾನುಭಾವರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ವೇದಿಕೆ ಮೇಲೆ ಆನಂದ ಬಬಲಿ, ಶಶಿರೇಖಾ ಕುಮಠಿ, ಮಹೇಶ ಕುಮಠಿ, ನೆಹರು ಯುವ ಕೇಂದ್ರದ ದುಂಡಯ್ಯ ಮಳ್ಳೆನ್ನವರ, ಲಕ್ಷ್ಮೀ ಮಾದರ, ಬಿ.ಪಿ. ಅಳಗೋಡಿ, ಕೆ.ವಿ.ಕೌಜಲಗಿ, ಖಾನಾಪೂರೆ ಸೇರಿದಂತೆ ಇತರರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 