ಲೋಕಸಭೆಯಲ್ಲಿ ಬಿಜೆಪಿಯಿಂದ ನಾಪತ್ತೆಯಾದ ಸೈನಿಕನ ವಿಷಯ ಪ್ರಸ್ತಾಪ
ನವದೆಹಲಿ, ಫೆ 4 : ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯುತ್ತಿದ್ದ ಸೈನಿಕನೋರ್ವ ಹಿಮದಲ್ಲಿ ಜಾರಿ ನಾಪತ್ತೆಯಾಗಿರುವ ವಿಷಯವನ್ನು ಲೋಕಸಭೆಯಲ್ಲಿ ಮಂಗಳವಾರ ಬಿಜೆಪಿ ಪ್ರಸ್ತಾಪಿಸಿತು.
ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಅಜಯ್ ಭಟ್, ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಜ 8 ರಂದು ಕಾವಲು ಕಾಯುತ್ತಿದ್ದ ಹವಲ್ದಾರ್ ರಾಜೇಂದ್ರ ಸಿಂಗ್ ನೇಗಿ ಕಾಣೆಯಾಗಿದ್ದಾರೆ.
ಘಟನೆ ನಡೆದು ಒಂದು ತಿಂಗಳಾದರೂ ಕಾಣೆಯಾದ ಸೈನಿಕನ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸೈನಿಕ ಹಿಮದಲ್ಲಿ ಜಾರಿ ಗಡಿ ದಾಟಿರಬಹುದು ಎಂದು ಹೇಳಲಾಗುತ್ತಿದೆ ಎಂದು ಹೇಳಿದರು.
ಸರ್ಕಾರ ಮಧ್ಯಪ್ರವೇಶಿಸಿ ಸೈನಿಕನ ಕುರಿತು ಮಾಹಿತಿ ನೀಡಬೇಕು ಎಂದು ಅಜಯ್ ಭಟ್ ಕೋರಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 