ಸೋಂಕು ನಿಯಂತ್ರಣವಾಗುವವರೆಗೂ ಜ್ಯುಬಿಲೆಂಟ್ ಕಾರ್ಖಾನೆ ಆರಂಭವಿಲ್ಲ: ಎಸ್ ಟಿ. ಸೋಮಶೇಖರ್
ಬೆಂಗಳೂರು, ಏ.15, ರಾಜ್ಯದಲ್ಲಿ ಕೊರೊನಾ ಸೋಂಕು ಸಂಪೂರ್ಣವಾಗಿ ನಿಯಂತ್ರಣವಾಗುವವರೆಗೂ ನಂಜನಗೂಡಿನ ಜ್ಯುಬಿಲೆಂಟ್ ಕಾರ್ಖಾನೆ ತೆರೆಯುವ ಪ್ರಶ್ನೆಯೇ ಇಲ್ಲ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.ಇಂದು ರಾಜ್ಯದಲ್ಲಿ 17 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 10 ಪ್ರಕರಣಗಳು ಮೈಸೂರಿನದ್ದೇ ಆಗಿದ್ದು, ಇದರಲ್ಲಿ 9 ಮಂದಿ ಜ್ಯುಬಿಲೆಂಟ್ ಕಾರ್ಖಾನೆಯ ನೌಕರರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮೊದಲು ಎಲ್ಲವೂ ತಿಳಿಯಾಗಬೇಕು, ನೆಮ್ಮದಿಯಾಗಿ ಕೆಲಸ ಮಾಡುವ ವಾತಾವರಣ ನಿರ್ಮಾಣವಾಗಬೇಕು, ಆಗ ಮಾತ್ರ ಕಂಪನಿ ತೆರೆಯಲು ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮೈಸೂರು ಜಿಲ್ಲೆಯಾದ್ಯಂತ ಕೊರೊನಾ ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ 2.0 ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದ್ದು, ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳನ್ನು ವಶಕ್ಕೆ ಪಡೆದು ಮೇ 3ರವರೆಗೆ ಲಾಕ್ ಡೌನ್ ಮುಗಿಯುವವರೆಗೂ ವಾಹನ ವಾಪಸ್ಸು ನೀಡದಂತೆ ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇಲ್ಲಿಯವರೆಗೆ ಮೈಸೂರಿನಲ್ಲಿ 58 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಅವುಗಳ ಪೈಕಿ 12 ಮಂದಿ ಗುಣಮುಖರಾಗಿದ್ದಾರೆ. ಇನ್ನುಳಿದ 46 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 