ಲಕ್ಷ್ಮೀ ವೆಂಕಟೇಶ್ವರ ಮೂರ್ತಿಗಳ ಅದ್ದೂರಿ ಮೆರವಣಿಗೆ ಚಾಲನೆ
ಲೋಕದರ್ಶನವರದಿ
ಹಾವೇರಿ: ತಾಲೂಕಿನ ನೆಗಳೂರ ಗ್ರಾಮದಲ್ಲಿ ನೂತನವಾಗಿ ನಿಮರ್ಿಸಿರುವ ಲಕ್ಷ್ಮೀ ವೆಂಕಟೇಶ್ವರ ದೇವಾಲಯ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ರವಿವಾರ ನೂತನ ಲಕ್ಷ್ಮೀ ವೆಂಕಟೇಶ್ವರ ಮೂರ್ತಿ ಮರವಣಿಗೆ ಅದ್ದೂರಿ ಯಾಗಿ ಜರುಗಿತು. ಗ್ರಾಮದ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಮೇರವಣಿಗೆಗೆ ಚಾಲನೆ ನೀಡಿದರು. ಸಂಸ್ಥಾನ ಹಿರೇಮಠ ದಿಂದ ಪ್ರಾರಭಗೊಂಡ ಮೇರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವೆಂಕಟೇಶ್ವರ ದೇವಾಲಯ ತಲುಪಿತು. ಮೇರವಣಿಗೆಯಲ್ಲಿ ಮಹಿಳೆಯರು ಪೂರ್ಣ ಕುಂಭ ಕಳಸ ಆರತಿ ಗಳೊಂದಿಗೆ ಸಾಗಿದರು. ಮೇರವಣಿಗೆಯಲ್ಲಿ ಎಪಿಎಂಸಿ ಸದಸ್ಯ ಕೃಷ್ಣರೆಡ್ಡಿ ಮೈದೂರ ಬಸನಗೌಡ ಸುಕುಳಿ ಶಿವಾನಂದಪ್ಪ ಸಪ್ಪಿನ್ ಸಿದ್ದಮಲ್ಲಪ್ಪ ಬಾಲಣ್ಣನವರ. ಹನುಮಂತಪ್ಪ ತಮ್ಮಣ್ಣನವರ ನೀಲಪ್ಪ ಸಂಜೀವಣ್ಣನವರ ಶಿವಾನಂದ ಸಂಜೀವಣ್ಣನವರ ಡಿ.ಹೆಚ್.ತಮ್ಮಣ್ಣನವರ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 