ಪಂದ್ಯ ಸ್ಥಳಾಂತರಿಸುವಂತೆ ಕೇಳಿಕೊಂಡಿದ್ದು ತಡವಾಯಿತು
ನವದೆಹಲಿ, ನ.4: ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮೊದಲ ಟಿ-20 ಪಂದ್ಯಕ್ಕೆ ವಾಯುಮಾಲಿನ್ಯ ಕಾಟ ನೀಡಿದ್ದು, ಪಂದ್ಯವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬೇರೆ ಸ್ಥಳಕ್ಕೆ ವರ್ಗಾಯಿಸದೇ ಇರುವುದು ಬೇಸರ ತಂದಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ನಜ್ಮುಲಾ ಹಸನ್ ತಿಳಿಸಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಈ ಮೊದಲೇ ತಿಳಿಸಿದಂತೆ ಬದಲಾವಣೆಯ ಮನವಿ ತಡವಾಯಿತು ಎಂದು ತಿಳಿಸಿದ್ದರು. ಬಾಂಗ್ಲಾದೇಶದ ಆಟಗಾರರು ಅಭ್ಯಾಸದ ವೇಳೆ ಮಾಸ್ಕ್ ಧರಿಸಿದ್ದರು. ನಿಜ ಹೇಳಬೇಕಂದರೆ ಈ ಬಗ್ಗೆ ನಮಗೆ ತಿಳಿದಿರಲಿಲ್ಲ. ಇಲ್ಲಿನ ಪರಿಸ್ಥಿತಿ ಕೊನೆಯ ಕ್ಷಣದಲ್ಲಿ ಅರಿವಾಯಿತು. ಅಲ್ಲದೆ ದೆಹಲಿಯಲ್ಲಿನ ವಾತಾವರಣದ ಬಗ್ಗೆ ಅಂತರ್ಜಾಲದಲ್ಲಿ ನೋಡಿ ಗಾಭರಿ ಪಟ್ಟೆ ಎಂದು ನಜ್ಮುಲಾ ಹಸನ್ ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಳಿದಾಗ ಮಂಜು ಮುಸುಕಿದ ವಾತಾವರಣ ಕಾಣಿಸಿಕೊಂಡಿತು. ಆದರೆ ಇದು ಮಂಜಲ್ಲ ಎಂಬುದು ತಡವಾಗಿ ತಿಳಿಯಿತು. ಹೀಗಿರುವಾಗ ಹೇಗೆ ಆಡುವುದು ಎಂದು ಪ್ರಶ್ನಿಸಿದ್ದೆ. ಈ ವಿಚಾರವಾಗಿ ಆಟಗಾರರು ಹಾಗೂ ತರಬೇತು ದಾರರೊಂದಿಗೆ ಸಂಪರ್ಕದಲ್ಲಿದ್ದೆ ಎಂದಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 