ಕುರಿಗಾಹಿಯ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ
ದಾವಣಗೆರೆ, ಜ 23 : ಕುರಿಗಾಹಿಯನ್ನು ಕೊಂದು ಚಿನ್ನಾಭರಣ, ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ರಿಯೋರ್ವನಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ ದಂಡ ವಿಧಿಸಿದೆ.
ಹರಿಹರ ತಾಲ್ಲೂಕು ಭಾನುವಳ್ಳಿಯ ಹಾಲೇಶ್ (30) ಶಿಕ್ಷೆಗೊಳಗಾದ ಅಪರಾಧಿ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮುದ್ದೆಹಳ್ಳಿ ಗ್ರಾಮದ ಮುದ್ದಣ್ಣ ಎಂಬ ಕುರಿಗಾಹಿ 2015ರ ಜುಲೈ 7ರಂದು ತನ್ನ ಸಂಗಡಿಗರ ಜತೆಗೆ ಹರಿಹರ ತಾಲ್ಲೂಕಿನ ಲಕ್ಕಶೆಟ್ಟಿಹಳ್ಳಿಯ ಮಲ್ಲಿಕಾರ್ಜುನ ಅವರ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ.
ಮುದ್ದಣ್ಣ ಒಬ್ಬರೇ ಬಿಡಾರದ ಬಳಿ ಇದ್ದಾಗ ಹಾಲೇಶ್ ಎಂಬಾತ ಮುದ್ದಣ್ಣನ ಮೇಲೆ ಮಾರಕಾಸ್ತ್ರದಿಂದ ಕೊಲೆ ಮಾಡಿ ಉಂಗುರ, ಕೈಚೈನು, ಹಣ ದೋಚಿದ್ದ.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆಂಗಬಾಲಯ್ಯ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ 10 ಸಾವಿರ ರೂ.ಗಳನ್ನು ಮೃತರ ಮಗ ಎಂ. ಬಸೇಗೌಡ ಅವರಿಗೆ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 