ಜಂತು ನಾಶಕ ಮಾತ್ರೆ ಸೇವನೆ ಅವಶ್ಯ: ರಾಘವೇಂದ್ರ
ಲೋಕದರ್ಶನವರದಿ
ರಾಣೇಬೆನ್ನೂರು11: ಜಂತುಹುಳು ನಿವಾರಣಾ ಔಷಧಿ ಸೇವಿಸುವುದರಿಂದ ಆರೋಗ್ಯ ಸುಧಾರಣೆ, ಅಪೌಷ್ಟಿಕತೆ ನಿವಾರಣೆ ಹಾಗೂ ಬೌಧ್ಧಿಕ ಬೆಳವಣಿಗೆಯಾಗಲಿದೆ. ಬರಿ ಗಣ್ಣಿಗೆ ಕಾಣಿಸದ ಜಂತುಹುಳುಗಳ ಮಕ್ಕಳ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಕಿರಿಯ ಆರೋಗ್ಯ ಸಹಾಯಕ ರಾಘವೇಂದ್ರ ಪಿ ಹೇಳಿದರು.
ತಾಲೂಕಿನ ಮಾಕನೂರು ಗ್ರಾಮದ ಮುರಾಜರ್ಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣೆ ದಿನ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 1 ರಿಂದ 19 ವರ್ಷದ ಒಳಗಿನ ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆಯನ್ನು ಎಲ್ಲಾ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ದಾಖಲಾಗದ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆಗಳನ್ನು ಫೆ.17 ರಂದು ನೀಡಲಾಗುತ್ತಿದೆ ಎಂದರು. ಪ್ರಾಂಶುಪಾಲ ವಾಗೀಶ ಉದಾಸಿಮಠ, ವೀರಣ್ಣ ನೂರಂದೂರು, ಎಂ.ಐ. ಕೊಠಡೂರು, ತನ್ಮಯ, ಲಲಿತಶ್ರೀ ಜಿ.ಬಿ, ಪ್ರೇಮಾ ಆರ್.ಬಿ, ಪ್ರತಿಭಾ ಹಡಗಲಿ, ಸಂಗೀತಾ ದೀಕ್ಷಿತ್, ಬಸವರಾಜ್ ಲಮಾಣಿ, ರೇಣುಕಾ ಆರೇರ, ಮಂಜುನಾಥ ಸೇರಿದಂತೆ ಮತ್ತಿತರರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 