ಸೆ, 30 ರಂದು ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ನೂತನ ಗೋಪುರ ಕಳಸಾರೋಹಣ
The new tower of Lakshmi Venkateswara Temple will be inaugurated on September 30th.
ಜಮಖಂಡಿ 29: ತಾಲ್ಲೂಕಿನ ತುಂಗಳ ಗ್ರಾಮದಲ್ಲಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ನೂತನ ಗೋಪುರ ಹಾಗೂ ಕಳಸಾರೋಹಣ ಸೆ, 30 ರಂದು ಮಧ್ಯಾಹ್ನ 1 ಗಂಟೆಗೆ ಜರುಗುವುದು ಎಂದು ಡಾ,ಟಿ,ಪಿ, ಗಿರಡ್ಡಿ ತಿಳಿಸಿದರು.
ನಗರದ ರಮಾ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿವ್ಯಸಾನಿಧ್ಯವನ್ನು ಪೂಜ್ಯಶ್ರೀ 108 ಗುರುಶಾಂತಲಿಂಗ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳು, ಮಾತೋಶ್ರೀ ಅನುಸೂಯಾ ತಾಯಿಯವರು, ರಾಜಯೋಗಿನಿ ಬಿ,ಕೆ,ವೈಷ್ಣವಿ ಅಕ್ಕನವರು, ಶಂಕರ ಶ್ರೀಹರಿ ಕುಲಕರ್ಣಿ ಶ್ರೀಗಳು ವಹಿಸುವರು. ಉದ್ಘಾಟಿಕರಾಗಿ ಸಚಿವ ಎಚ್,ಕೆ, ಪಾಟೀಲ ಅವರು ನೇರವೆರುಸುವರು ಹಾಗೂ ಹಾಲಿ, ಮಾಜಿ ಶಾಸಕರುಗಳು, ವಿವಿಧ ಸಂಘ, ಸಂಸ್ಥೆಯ ಪದಾಧಿಕಾರಿಗಳು, ರಾಜಕೀಯ ಮುಖಂಡರುಗಳು ಅನೇಕರು ಭಾಗವಹಿಸಲಿದ್ದಾರೆ ಎಂದರು.
ಕಳಸಾರೋಹನದ ಮೆರೆವಣಿಗೆಯಲ್ಲಿ ಕುಂಬಹೊತ್ತ ಮಹಿಳೆಯರು ಹಾಗೂ ವಿವಿಧ ವಾದ್ಯಮೇಳದೊಂದಿಗೆ ಭವ್ಯ ಮೆರೆವಣಿಯನ್ನು ಪ್ರಮುಖ ರಸ್ತೆಯ ಮೂಲಕ ಸಂಚರಿಸುವುದು ಎಂದರು.
ಇದೇ ಸಂದರ್ಭದಲ್ಲಿ ಕಲ್ಲಪ್ಪ ಗಿರಡ್ಡಿ, ಬಸವರಾಜ ನ್ಯಾಮಗೌಡ, ಬಸವನಗೌಡ ಕನ್ನಾಳ, ಕಲ್ಲಪ್ಪ ಗಿರಡ್ಡಿ, ಶ್ರೀನಿವಾಸ ಹೊಸೂರ, ಮಲ್ಲಪ್ಪ ಗಿರಡ್ಡಿ, ಮಹೇಶ ನ್ಯಾಮಗೌಡ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 