ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದು ಪ್ರಜಾಸೇವಾ ಆಂದೋಲನದ ಉದ್ದೇಶ : ಸಚಿವ ರುದ್ರ್ಪ ಲಮಾಣಿ
The objective of the 'Prajaseva Andolana' is to provide on-the-spot solutions to people's problems:
ಲೋಕದರ್ಶನ ವರದಿ
ಹಾವೇರಿ, ಸೆ.5: ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಜನರ ಮನೆ ಬಾಗಿಲಿಗೆ ತಲುಪಬೇಕು ಎಂಬ ಉದ್ದೇಶದಿಂದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಸಂದೇಶದೊಂದಿಗೆ ಪ್ರಜಾಸೇವಾ ಆಂದೋಲನ ರೂಪಿಸಲಾಗಿದೆ. ಸಾರ್ವಜನಿಕರು ಹಾಗೂ ಸರ್ಕಾರದ ನಡುವೆ ನೇರ ಸಂಪರ್ಕ ಕಲ್ಪಿಸುವ ವೇದಿಕೆಯಾಗಿ ಈ ಆಂದೋಲನ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರ್ಪ ಲಮಾಣಿ ಹೇಳಿದರು. ಹಾನಗಲ್ ಪಟ್ಟಣದ ಶ್ರೀ ಕುಮಾರೇಶ್ವರ ಮಠದಲ್ಲಿ ಶನಿವಾರ ನಡೆದ ‘ಪ್ರಜಾಸೇವೆ ನಿಮ್ಮದು, ಪರಿಹಾರ ನಮ್ಮದು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾರ್ವಜನಿಕರ ಎಲ್ಲ ಸಮಸ್ಯೆಗಳನ್ನು ಒಂದೇ ಬಾರಿಗೆ ಪರಿಹರಿಸಲು ಸಾಧ್ಯವಾಗದಿದ್ದರೂ, ತಾಲೂಕು, ಉಪವಿಭಾಗ ಹಾಗೂ ಜಿಲ್ಲಾಮಟ್ಟದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುವುದು. ಕಾಲಾವಕಾಶ ಅಗತ್ಯವಿರುವ ಅರ್ಜಿಗಳಿಗೆ ನಿಯಮಾನುಸಾರ ನಿಗದಿತ ಅವಧಿಯಲ್ಲಿ ಪರಿಹಾರ ಕಲ್ಪಿಸಿ ಅರ್ಜಿದಾರರಿಗೆ ಸೂಕ್ತ ಹಿಂಬರಹ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಪ್ರಸ್ತುತ ಪ್ರಜಾಸೇವಾ ಸಭೆಗಳು ತಾಲೂಕು ಮಟ್ಟದಲ್ಲಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೂ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 