ಮೊಸರು ಗುಂಡಿಗೆ ಒಡೆದ ಊರ ಗೌಡರು
The village Gowdas who broke the curd pit
ಮೊಸರು ಗುಂಡಿಗೆ ಒಡೆದ ಊರ ಗೌಡರು
ಇಂಡಿ: ತಾಲೂಕಿನ ಸುಕ್ಷೇತ್ರ ತಡವಲಗಾ ಗ್ರಾಮದ ಹನುಮಾನ್ ಜಯಂತಿ ನಿಮಿತ್ತವಾಗಿ ಮೊಸರು ಗುಂಡಿಗೆ ಗ್ರಾಮದ ಊರ ಗೌಡರು ಒಡಿಯುವುದರ ಮೂಲಕ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಶ್ರೀ ಶಾಲಿವಾಹನ ಶಕೆ 1947 ವಿಶ್ವಾವಸುನಾಮ ಸಂವತ್ಸರ ಚೈತ್ರ ಶು.14 ಶುಕ್ರವಾರ ರಂದು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಬಲಭೀಮ ದೇವರಿಗೆ ಬೆಳೆಗೆ ಆರು ಗಂಟೆಗೆ ರುದ್ರಾಭಿಷೇಕ ಹಾಗೂ ಎಲೆ ನೆರವೇರಿಸಲಾಯಿತು. ನಂತರ ಮದ್ಯಾಹ್ನ 4ಗಂಟೆಗೆ ಊರ ಗೌಡರ ಮನೆಯಿಂದ ಗೋಪಾಳ ಕಾವಲಿ ಅತಿ ವಿಜೃಂಭಣೆಯಿಂದ ವಾದ್ಯ ವೈಭವಗಳೊಂದಿಗೆ ದೇವರ ಗುಡಿಗೆ ಬಂದು ದೇವಸ್ಥಾನದಲ್ಲಿ ಗೋಪಾಳ ಕಾವಲಿ (ಮೊಸರು ಗಡಿಗೆ) ಯನ್ನು, ಸಾಂಪ್ರದಾಯಿಕ ಪದ್ಧತಿಯಂತೆ ಊರ ವಾಲಿಕಾರ ಕಟ್ಟುತ್ತಾರೆ. ಅದನ್ನು ಊರ ಗೌಡರು ಅದನ್ನು ಬಂದು ಒಡಿಯುತ್ತಾರೆ, ನಂತರ ಜಾತ್ರೆಗೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ನಂತರ ವಿವಿಧ ಗ್ರಾಮಗಳಿಂದ ಬಂದ ಕುಸ್ತಿ ಪಟುಗಳಿಂದ ಕುಸ್ತಿ ಸೆಣಸಾಟ ನುಡಿಯಿತು. ಈ ಪದ್ಧತಿ ಆದಿಕಾಲದಿಂದಲೂ ನಡೆದುಕೊಂಡ ಬಂದ ಪದ್ಧತಿಯಾಗಿ ಎಂದು ಹೇಳುತ್ತಾರೆ ಗ್ರಾಮದ ಹಿರಿಯರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 