ಮಕ್ಕಳಲ್ಲಿ ಬಾಂಧವ್ಯದ ಬೆಸುಗೆ ಬೆಸೆಯಬೇಕು
ಲೋಕದರ್ಶನ ವರದಿ
ಯರಗಟ್ಟಿ 06: ಇಂದಿನ ಸಮಾಜದಲ್ಲಿ ಪಾಶ್ಚಿಮಾತ್ಯ ಉಡುಗೆ ತೊಡುಗೆ, ಆಚಾರ ವಿಚಾರ, ನಡವಳಿಕೆಗಳಿಗೆ ಬೆನ್ನು ಹತ್ತಿ ಭಾರತೀಯ ಸಂಸ್ಕೃತಿ ಹಾಗೂ ಸಂಸ್ಕಾರಕ್ಕೆ ಪೆಟ್ಟು ಬೀಳುತ್ತಿದೆ, ಇಂದಿನ ಮಕ್ಕಳಲ್ಲಿ ಸಂಭಂದಗಳ ಮಹತ್ವದ ಜೊತೆಗೆ ಭಾಂದವ್ಯದ ಬೆಸುಗೆ ಬೆಸೆಯಬೇಕಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅರ್ಜುನ ಕಾಂಬೋಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಇಲ್ಲಿನ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 8ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದರು.
ಎಸ್ಡಿಎಮ್ಸಿ ಅಧ್ಯಕ್ಷೆ ಸೃಷ್ಠಿ ಪಟ್ಟಣಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದು ಖಾಸಗಿ ಶಾಲಾ ಸಂಸ್ಥೆಗಳು ಡೊನೆಷನ್ ಪಡೆಯುತ್ತಾ ಶಿಕ್ಷಣವನ್ನು ವ್ಯಾಪಾರಿಕರಣ ಮಾಡಿಕೊಂಡಿದ್ದಾರೆ ಅಷ್ಟೆ, ಸರಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ ಎಂದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯ ಮಾನ್ಯರನ್ನು ಸನ್ಮಾನಿಸಲಾಯಿತು, ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ಜರುಗಿದವು.
ರಾಜರಾಜೇಶ್ವರಿ ಆಶ್ರಮದ ಗಣಪತಿ ಮಹಾರಾಜರು ಸಾನಿಧ್ಯ ವಹಿಸಿ ಆಶಿರ್ವಚನ ನೀಡಿದರು, ಜಿ.ಪಂ.ಸದಸ್ಯ ಅಜೀತಕುಮಾರ ದೇಸಾಯಿ ಕಾರ್ಯಕ್ರಮ ಉದ್ಘಾಟಿಸಿದರು, ಗ್ರಾ.ಪಂ.ಅಧ್ಯಕ್ಷೆ ಕಸ್ತೂರಿ ಕಡೆಮನಿ, ಉಪಾಧ್ಯಕ್ಷೆ ಲಕ್ಷ್ಮೀ ಸೊನ್ನದ, ಸದಾಶಿವ ಗುಡಗುಂಟಿ, ಮನೋಹರ ಬೆಲ್ಲದ, ಶಿವಾನಂದ ಕರಿಗೊಣ್ಣವರ, ಗೌಡಪ್ಪ ಉದಪುಡಿ, ಆಶಾ ಪರೀಟ, ಮಹಾದೇವಿ ಪೂಜೇರ, ಎಲ್.ತಿಪ್ಪಾನಾಯ್ಕ, ಎಸ್ಡಿಎಮ್ಸಿ ಹಾಗೂ ಗ್ರಾ.ಪಂ.ಸರ್ವ ಸದಸ್ಯರು, ಶಾಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಪಾಲಕರು, ಮುಂತಾದವರಿದ್ದರು. ಮುಖ್ಯ ಶಿಕ್ಷಕ ಆರ್.ಬಿ.ಗಾಣಿಗೇರ ಸ್ವಾಗತಿಸಿದರು, ಶಿಕ್ಷಕ ಎಸ್.ಬಿ.ಪಾಣಿಶೆಟ್ಟಿ ನಿರೂಪಿಸಿದರು, ಶಿಕ್ಷಕ ಶಿವಾನಂದ ಮಿಕಲಿ ವಂದಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 