ಗಾಳಿ ಆಂಜನೇಯ ದೇವಾಲಯದ ಹಣ ಕಳವು
ಬೆಂಗಳೂರು, ಜ. 27, ನಗರದ ಪ್ರಸಿದ್ಧ ಗಾಳಿ ಆಂಜನೇಯ ದೇವಾಲಯದ ಲಾಕರ್ ಒಡೆದು ಹಣ ಕಳವು ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮೈಸೂರು ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನ ಐತಿಹಾಸಿಕ ಪ್ರಸಿದ್ಧ ದೇವಸ್ಥಾನವಾಗಿದೆ. 48 ಸಾವಿರ ರೂ. ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ ಎಂದು ಆರೋಪಿಸಿ ದೇವಸ್ಥಾನ ಟ್ರಸ್ಟಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಜ. 14ರಂದು ರಾತ್ರಿ ದೇವಾಲಯದ ಗೋಡೆಯ ಮೇಲಿಂದ ಒಳ ನುಗ್ಗಿರುವ ಕಳ್ಳರು ಲಾಕರ್ ಮುರಿದು ಹಣ ದೋಚಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಕಳ್ಳತನವಾದ ಹಣವು ಧನುರ್ಮಾಸದ ಪ್ರಯುಕ್ತ ಇರುಮುಡಿಯಿಂದ ಬಂದ ಹಣ ಎಂದು ದೇವಾಲಯದ ಟ್ರಸ್ಟಿಗಳು ತಿಳಿಸಿದ್ದಾರೆ.ಟ್ರಸ್ಟಿಗಳು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 