ಅನೀಮಿಯಾ ಮುಕ್ತ ಭಾರತಕ್ಕೆ ಕೈಜೋಡಿಸಿದ ಐ.ಆರ್.ಡಿ. ಮತ್ತು ಸ್ಪಂದನ ಸಂಸ್ಥೆಗಳ ಕಾರ್ಯ ಶ್ಲಾಘನೀಯ
The work of IRD and Spandana organizations in joining hands for an anemia-free India is commendable
ಲೋಕದರ್ಶನ ವರದಿ
ವಿಜಯಪುರ 23: ಅನೀಮಿಯಾ ಮುಕ್ತ ಭಾರತ ಹಾಗೂ ಅನೀಮಿಯಾ ಮುಕ್ತ ಕರ್ನಾಟಕ ಅಭಿಯಾನಕ್ಕೆ ಕೈಜೋಡಿಸಿ ರಾಜ್ಯಾದ್ಯಂತ ಜನಜಾಗೃತಿ, ತಪಾಸಣೆ ಹಾಗೂ ಉಚಿತ ಓಷಧಿ ವಿತರಣೆಯ ಮೂಲಕ ಮಹತ್ವದ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ಐ.ಆರ್.ಡಿ.) ಮತ್ತು ಸ್ಪಂದನ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಆಸ್ಪತ್ರೆ ವಿಜಯಪುರದ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ ಹೇಳಿದರು. ಮಂಗಳವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಐ.ಆರ್.ಡಿ ಮತ್ತು ಸ್ಪಂದನ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತೆರೆಯಲಾದ ಉಚಿತ ಅನೀಮಿಯಾ ಅರಿವು, ರಕ್ತಹೀನತೆ ತಪಾಸಣೆ ಹಾಗೂ ಓಷಧಿ ವಿತರಣಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅನೀಮಿಯಾ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಾಬು ಜಿ. ಸಜ್ಜನ ಹಾಗೂ ಸ್ಪಂದನ ಸಂಸ್ಥೆಯ ಅಧ್ಯಕ್ಷ ಮಹಾದೇವ ದೇವರ ಅವರ ನೇತೃತ್ವದಲ್ಲಿ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮದಲ್ಲಿ ಪ್ರಾಯೋಗಿಕವಾಗಿ 577 ಶಾಲಾ ಮಕ್ಕಳ ರಕ್ತಹೀನತೆ ತಪಾಸಣೆ ನಡೆಸಲಾಗಿತ್ತು. ಈ ವೇಳೆ ಶೇ.38 ರಷ್ಟು ಮಕ್ಕಳು ಅನೀಮಿಯಾದಿಂದ ಬಳಲುತ್ತಿರುವುದು ಪತ್ತೆಯಾಗಿತ್ತು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 