ಯುವ ಪೀಳಿಗೆಯು ಅನ್ವೇಷಣಾಸಕ್ತಿ ಬೆಳೆಸಿಕೊಳ್ಳಬೇಕು: ಡಾ.ಸವಿತಾ ಸೋನಾಲಿ
The younger generation should develop a passion for exploration: Dr. Savita Sonali
ಯುವ ಪೀಳಿಗೆಯು ಅನ್ವೇಷಣಾಸಕ್ತಿ ಬೆಳೆಸಿಕೊಳ್ಳಬೇಕು: ಡಾ.ಸವಿತಾ ಸೋನಾಲಿ
ಬಳ್ಳಾರಿ 24: ಯುವ ಪೀಳಿಗೆಯು ಹೊಸ ವಿಷಯ ಪ್ರಯೋಗ ಅಥವಾ ಅನ್ವೇಷಣಾ ಮಾಡುವ ಆಸಕ್ತಿ ಆಳವಡಿಸಿಕೊಳ್ಳಬೇಕು ಎಂದು ರಾವ್ ಬಹದ್ದೂರ್ ವೈ ಮಹಾಬಲೇಶ್ವರ ಇಂಜಿನಿಯರಿಂಗ್ (ಆರ್ವೈಎಂಇಸಿ) ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ಸವಿತಾ ಸೊನಾಲಿ ಅವರು ಹೇಳಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಆರ್ಎಎಂಪಿ ಯೋಜನೆಯಡಿ ನಗರದ ಕಂಟೋನ್ಮೆಂಟ್ನ ಆರ್ವೈಎಂಇಸಿ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಇಂಕ್ಯುಬೇಶನ್ ಯೋಜನೆಯ ಬಗ್ಗೆ ಒಂದು ದಿನದ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಆರ್ವೈಎಂಇಸಿ ಕಾಲೇಜು ವತಿಯಿಂದ ಒಟ್ಟು 12 ಇಂಕ್ಯೂಬೇಶನ್ ಚಟುವಟಿಕೆಗಳ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾಲೇಜಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಗರಿಷ್ಟ 03 ಲಕ್ಷದಂತೆ ಪ್ರೋತ್ಸಾಹ ಪಡೆದುಕೊಂಡಿದೆ ಎಂದು ಎಂದು ತಿಳಿಸಿದರು.
ಈ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳು ಭಾಗವಹಿಸಿ ಇಂಕ್ಯುಬೇಶನ್ ಸೌಲಭ್ಯಗಳು, ಯಶಸ್ಸಿನ ಕಥೆಗಳ ಬಗ್ಗೆ ಅರಿವು ಮೂಡಿಸಲಾಯಿತು.ಕೈಗಾರಿಕೆಯಲ್ಲಿ ಯಶಸ್ವಿ ಉದ್ದಿಮೆದಾರರು ಕೆವಿಟಿ ಕೈಗಾರಿಕೆಯ ವೀರೇಂದ್ರ ಕುಮಾರ್ ಅವರು ಪಾಲ್ಗೊಂಡು ಕೈಗಾರಿಕೆ ಪ್ರಾರಂಭಿಸುವ ಕುರಿತು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳು, ಉದ್ದಿಮೆದಾರರೊಂದಿಗೆ ಮಾಹಿತಿ ಹಂಚಿಕೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸೋಮಶೇಖರ್.ಬಿ., ಆರ್ವೈಎಂಇಸಿ ಮೆಕಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಕೋರಿ ನಾಗರಾಜ, ಅಡ್ವಕೇಟ್ ಮತ್ತು ಲೀಗಲ್ ಕೌನ್ಸಿಲ್ ಸುಜಾತ ಲಕ್ಷ್ಮೇಶ್ವರ, ಹೆಡ್ ಆಫ್ ಪೆಟೆಂಟ್ ಸೆಲ್ನ ಶರತ್ ಕುಮಾರ್,ಪಿಜಿ ಕೋ-ಆರ್ಡಿನೇಟರ್ ಚಿಟ್ರಿಕಿತೋಟಪ್ಪ, ಇಡಿಸಿ ಕೋ-ಆರ್ಡಿನೇಟರ್ ಡಾ.ಆರ್.ಎಚ್.ಎಂ.ಸೋಮನಾಥ ಸ್ವಾಮಿ, ಇಡಿಸಿ ಕೋ-ಆರ್ಡಿನೇಟರ್ ಬೆರಿಗಿ ವೀರೇಶ್ ಸೇರಿದಂತೆ ಉದ್ದಿಮೆದಾರರು, ಆರ್ವೈಎಂಇಸಿ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 