ಯುವ ಪೀಳಿಗೆಯು ಅನ್ವೇಷಣಾಸಕ್ತಿ ಬೆಳೆಸಿಕೊಳ್ಳಬೇಕು: ಡಾ.ಸವಿತಾ ಸೋನಾಲಿ
The younger generation should develop a passion for exploration: Dr. Savita Sonali
ಯುವ ಪೀಳಿಗೆಯು ಅನ್ವೇಷಣಾಸಕ್ತಿ ಬೆಳೆಸಿಕೊಳ್ಳಬೇಕು: ಡಾ.ಸವಿತಾ ಸೋನಾಲಿ
ಬಳ್ಳಾರಿ 24: ಯುವ ಪೀಳಿಗೆಯು ಹೊಸ ವಿಷಯ ಪ್ರಯೋಗ ಅಥವಾ ಅನ್ವೇಷಣಾ ಮಾಡುವ ಆಸಕ್ತಿ ಆಳವಡಿಸಿಕೊಳ್ಳಬೇಕು ಎಂದು ರಾವ್ ಬಹದ್ದೂರ್ ವೈ ಮಹಾಬಲೇಶ್ವರ ಇಂಜಿನಿಯರಿಂಗ್ (ಆರ್ವೈಎಂಇಸಿ) ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ಸವಿತಾ ಸೊನಾಲಿ ಅವರು ಹೇಳಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಆರ್ಎಎಂಪಿ ಯೋಜನೆಯಡಿ ನಗರದ ಕಂಟೋನ್ಮೆಂಟ್ನ ಆರ್ವೈಎಂಇಸಿ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಇಂಕ್ಯುಬೇಶನ್ ಯೋಜನೆಯ ಬಗ್ಗೆ ಒಂದು ದಿನದ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಆರ್ವೈಎಂಇಸಿ ಕಾಲೇಜು ವತಿಯಿಂದ ಒಟ್ಟು 12 ಇಂಕ್ಯೂಬೇಶನ್ ಚಟುವಟಿಕೆಗಳ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾಲೇಜಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಗರಿಷ್ಟ 03 ಲಕ್ಷದಂತೆ ಪ್ರೋತ್ಸಾಹ ಪಡೆದುಕೊಂಡಿದೆ ಎಂದು ಎಂದು ತಿಳಿಸಿದರು.
ಈ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳು ಭಾಗವಹಿಸಿ ಇಂಕ್ಯುಬೇಶನ್ ಸೌಲಭ್ಯಗಳು, ಯಶಸ್ಸಿನ ಕಥೆಗಳ ಬಗ್ಗೆ ಅರಿವು ಮೂಡಿಸಲಾಯಿತು.ಕೈಗಾರಿಕೆಯಲ್ಲಿ ಯಶಸ್ವಿ ಉದ್ದಿಮೆದಾರರು ಕೆವಿಟಿ ಕೈಗಾರಿಕೆಯ ವೀರೇಂದ್ರ ಕುಮಾರ್ ಅವರು ಪಾಲ್ಗೊಂಡು ಕೈಗಾರಿಕೆ ಪ್ರಾರಂಭಿಸುವ ಕುರಿತು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳು, ಉದ್ದಿಮೆದಾರರೊಂದಿಗೆ ಮಾಹಿತಿ ಹಂಚಿಕೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸೋಮಶೇಖರ್.ಬಿ., ಆರ್ವೈಎಂಇಸಿ ಮೆಕಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಕೋರಿ ನಾಗರಾಜ, ಅಡ್ವಕೇಟ್ ಮತ್ತು ಲೀಗಲ್ ಕೌನ್ಸಿಲ್ ಸುಜಾತ ಲಕ್ಷ್ಮೇಶ್ವರ, ಹೆಡ್ ಆಫ್ ಪೆಟೆಂಟ್ ಸೆಲ್ನ ಶರತ್ ಕುಮಾರ್,ಪಿಜಿ ಕೋ-ಆರ್ಡಿನೇಟರ್ ಚಿಟ್ರಿಕಿತೋಟಪ್ಪ, ಇಡಿಸಿ ಕೋ-ಆರ್ಡಿನೇಟರ್ ಡಾ.ಆರ್.ಎಚ್.ಎಂ.ಸೋಮನಾಥ ಸ್ವಾಮಿ, ಇಡಿಸಿ ಕೋ-ಆರ್ಡಿನೇಟರ್ ಬೆರಿಗಿ ವೀರೇಶ್ ಸೇರಿದಂತೆ ಉದ್ದಿಮೆದಾರರು, ಆರ್ವೈಎಂಇಸಿ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 