ಶಿಕ್ಷಕನ ಮನೆಯಲ್ಲಿ ಕಳ್ಳತನ
Theft at teacher's house: Karwar News
ಕಾರವಾರ 15: ಶಾಲೆಗೆ ತೆರಳಿದ್ದ ಶಿಕ್ಷಕನ ಮನೆಗೆ ನುಗ್ಗಿದ ಕಳ್ಳರು ಹಣ ದೋಚಿದ ಘಟನೆ ಕಾರವಾರ ತಾಲೂಕಿನ ಸದಾಶಿವಗಡದ ಚಿಂಚೆವಾಡಾದಲ್ಲಿ ನಡೆದಿದೆ. ಮನೆ ಕಳ್ಳತನವಾಗಿದೆ ಎಂದು ಸುನೀಲ ರಾಮಚಂದ್ರ ಗಾಂವಕರ್ ಠಾಣೆಗೆ ದೂರು ನೀಡಿದ್ದಾರೆ. ಫೆ.13 ರ ಬೆಳಗ್ಗೆ 9.15 ರ ಸುಮಾರಿಗೆ ಮನೆಯ ಮುಖ್ಯ ಬಾಗಿಲಿಗೆ ಬೀಗ ಹಾಕಿ ಶಾಲೆಗೆ ತೆರಳಿದ್ದರು.
ಚಿಂಚೆವಾಡಾದಲ್ಲಿರುವ ಅಮೃತಾ ವಿದ್ಯಾಲಯ ಹೈಸ್ಕೂಲಿಗೆ ಹೋಗಿದ್ದ ಮಗಳು , ಸಾಯಂಕಲ ನಾಲ್ಕು ಗಂಟೆಗೆ ಮನೆಗೆ ಬಂದು ನೋಡಿದಾಗ ಮನೆ ಕಳ್ಳತನವಾಗಿದ್ದು ಬೆಳಕಿಗೆ ಬಂದಿದೆ. ಸಿದ್ದರದ ಮಲ್ಲಿಕಾರ್ಜುನ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಕಳ್ಳರು ಮನೆಯ ಮುಖ್ಯ ಬಾಗಿಲಿಗೆ ಹಾಕಿದ್ದ ಬೀಗದ ಕೊಂಡಿಯನ್ನು ಮುರಿದು, ಒಳಹೊಕ್ಕಿ ಮನೆಯ ಬೆಡ್ ರೂಮ್ನಲ್ಲಿದ್ದ ಕಟ್ಟಿಗೆಯ ಕಪಾಟು ಮತ್ತು ಚಾವಿ ಹಾಕಿದ ಕಬ್ಬಿಣದ ಕಪಾಟನ್ನು ಮುರಿದು ಅದರಲ್ಲಿದ್ದ ಸಾವಿರಾರು ರೂಪಾಯಿಗಳನ್ನು ಕದ್ದಿದ್ದಾರೆ. ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 