25 ಜನ ಸಂಸದರಿದ್ದರು, ಜನ ಬೀದಿಗೆ ಬಂದಿದ್ದಾರೆ: ಸೌಮ್ಯ ರೆಡ್ಡಿ ಕಿಡಿ
ಧಾರವಾಡ, ಅ 4: ರಾಜ್ಯದಲ್ಲಿ 25 ಜನ ಸಂಸದರಿದ್ದರು, ನೆರೆ ಪರಿಹಾರ ಸಿಗದೇ ಜನ ಬೀದಿಗೆ ಬಂದಿದ್ದಾರೆ ಎಂದು ಶಾಸಕಿ ಸೌಮ್ಯ ರೆಡ್ಡಿ ಸಕರ್ಾರದ ವಿರುದ್ಧ ಕಿಡಿಕಾರಿದ್ದಾರೆ.ನೆರೆ ಪರಿಹಾರ ವಿಳಂಬದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಹದಿಂದ ನಾನು ಬಹಳ ನೊಂದಿದ್ದೇನೆ. ಇಂತಹ ಪ್ರವಾಹ ಶತಮಾನದಲ್ಲಿ ಆಗಿರಲಿಲ್ಲ. ಅನುದಾನ ಬಿಡುಗಡೆಗಾಗಿ ನಾವು ಸಾಕಷ್ಟು ಪ್ರತಿಭಟನೆ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದೇವೆ ಎಂದರು.
ಬಿಜೆಪಿ ಸರ್ಕಾರ ಜನಪರ ಕಾಳಜಿ ಹೊಂದಿದ್ದು, ಕೇಂದ್ರ ಸರ್ಕಾರದಿಂದ ಶೀಘ್ರ ಪರಿಹಾರ ತರುವ ವಿಶ್ವಾಸವಿದೆ. ನಮ್ಮ ಕಡೆಯಿಂದ ಎಷ್ಟು ಸಾಧ್ಯವೋ, ಅಷ್ಟು ಸಹಾಯ ಮಾಡಿದ್ದೇವೆ. ಈಗ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಆ ಜವಾಬ್ದಾರಿ ಇದೆ ಎಂದರು.
ಈಗಾಗಲೇ ನೆರೆ ಸಂತ್ರಸ್ಥರಿಗೆ ಪರಿಹಾರ ದೊರೆಯಬೇಕು ಎಂದು ಪ್ರತಿಭಟನೆ ಆರಂಭವಾಗಿದ್ದು, ಅನುದಾನ ಸಿಗುವವರೆಗೂ ನಾವು ಸುಮ್ಮನಿರುವುದಿಲ್ಲ ಎಂದು ಅವರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 