ರಾಜ್ಯದಲ್ಲಿ 28 ಹೊಸ ಕೊರೋನಾ ಪ್ರಕರಣಗಳು, ಸೋಂಕಿತರ ಸಂಖ್ಯೆ 642ಕ್ಕೇರಿಕೆ
ಬೆಂಗಳೂರು, ಮೇ 4,ದಾವಣಗೆರೆಯ 21 ಕೊರೋನಾ ಸೋಂಕಿತ ಪ್ರಕರಣಗಳು ಸೇರಿ ರಾಜ್ಯದಲ್ಲಿ ಭಾನುವಾರ ಸಂಜೆಯಿಂದ ಸೋಮವಾರ ಮಧ್ಯಾಹ್ನದವರೆಗೆ 28 ಪ್ರಕರಣಗಳು ಪತ್ತೆಯಾಗಿವೆ. ದಾವಣಗೆರೆಯ 533ನೇ ರೋಗಿಯ ಸಂಪರ್ಕ ಪಡೆದ 21 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜೊತೆಗೆ, ಚಿಕ್ಕಬಳ್ಳಾಪುರದ 30 ವರ್ಷದ ವ್ಯಕ್ತಿ, ಮಂಡ್ಯ ಜಿಲ್ಲೆಯ 20 ಹಾಗೂ 19 ವರ್ಷದ ಯುವತಿಯರಲ್ಲಿ ಸೋಂಕು ದೃಢಪಟ್ಟಿದೆ. ಹಾವೇರಿಯ ಸವಣೂರಿನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದ ಇತಿಹಾಸವಿರುವ 32 ವರ್ದ ವ್ಯಕ್ತಿ, ವಿಜಯಪುರದ 288ನೇ ರೋಗಿಯ ದ್ವಿತೀಯ ಸಂಪರ್ಕದ 62 ವರ್ಷದ ವೃದ್ಧೆ, ಕಲಬುರಗಿಯ 36 ವರ್ಷದ ಮಹಿಳೆ ಮತ್ತು ಚಿಂಚೋಳಿಯ 37 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.ಈ ನಡುವೆ, ಕಲಬುರಗಿ ನಿವಾಸಿ 56 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ಕೆಮ್ಮು ಹಾಗೂ ಜ್ವರದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 642ಕ್ಕೇರಿಕೆಯಾಗಿದ್ದು, 27 ಜನರು ಮೃತಪಟ್ಟಿದ್ದಾರೆ. 304 ಜನರು ಗುಣಮುಖರಾಗಿದ್ದಾರೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 