ಕೆಕೆಆರ್ ತಂಡದಲ್ಲಿ ನಿವೃತ್ತಿ ಹೊಂದುವ ಬಯಕೆಯಿದೆ: ರಸೆಲ್
ನವದೆಹಲಿ, ಮೇ 3,ವೆಸ್ಟ್ ಇಂಡೀಸ್ ತಂಡದ ದೈತ್ಯ ಆಲ್ರೌಂಡರ್ ಆಂಡ್ರೆ ರಸೆಲ್ ತಮ್ಮ ವೃತ್ತಿ ಜೀವನದ ಕಟ್ಟ ಕಡೆಯ ಪಂದ್ಯವನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪರವಾಗಿ ಆಡಬೇಕು ಎಂದು ಹೇಳಿಕೊಂಡಿದ್ದಾರೆ. ಕೆಕೆಆರ್ ತಂಡದ ಆನ್ಲೈನ್ ಕಾರ್ಯಕ್ರಮ 'ನೈಟ್ಸ್ ಅನ್ಪ್ಲಗ್ಡ್'ದಲ್ಲಿ ಮಾತನಾಡಿದ 32 ವರ್ಷ ಜಮೈಕನ್ ತಾರೆ ರಸೆಲ್, ಐಪಿಎಲ್ ಟೂರ್ನಿ ನೀಡಿದಷ್ಟು ರೋಮಾಂಚನ ಬೇರೆಲ್ಲೂ ತಮಗೆ ಸಿಕ್ಕಿಲ್ಲ ಎಂದಿದ್ದಾರೆ. ಅಂದಹಾಗೆ ಮಾರ್ಚ್ 29ರಂದು ಶುರುವಾಗಬೇಕಿದ್ದ ಐಪಿಎಲ್ 2020 ಟೂರ್ನಿಯು ಕೊರೊನಾ ವೈರಸ್ ಕಾರಣ ಅನಿರ್ದಿಷ್ಟ ಅವಧಿಗೆ ಮುಂದೂಡಲ್ಪಟ್ಟಿದೆ.
"ಒಂದು ಸತ್ಯ ಸಂಗತಿಯನ್ನು ಒಪ್ಪಿಕೊಳ್ಳುತ್ತೇನೆ. ಐಪಿಎಲ್ನಲ್ಲಿ ಸಿಕ್ಕಷ್ಟು ರೋಮಾಂಚನ ನನಗೆ ಬೇರೆಲ್ಲೂ ಸಿಕ್ಕಿಲ್ಲ. ಅಂದಹಾಗೆ ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್)ನಲ್ಲೂ ಅಂಥದ್ದೇ ಅನುಭವವಾಗುತ್ತದೆ. ಆದರೆ, ಐಪಿಎಲ್ ಮತ್ತು ಈಡನ್ ಗಾರ್ಡನ್ಸ್ಗೆ ಹೋಲಿಕೆ ಮಾಡಲು ಖಂಡಿತಾ ಸಾಧ್ಯವಿಲ್ಲ. ನನಗೆ ಸಿಗುವ ಸ್ವಾಗತ ಮತ್ತು ಪ್ರೀತಿ ಬೇರೆಲ್ಲೂ ಸಿಗುವುದಿಲ್ಲ. ಇದರಿಂದ ನನ್ನ ಮೇಲೆ ಒತ್ತಡ ಹೆಚ್ಚಾಗುತ್ತದೆ. ಇದು ಉತ್ತಮ ರೀತಿಯ ಒತ್ತಡ," ಎಂದು ರಸೆಲ್ ತಮ್ಮ ಮನದಾಳ ತೆರೆದಿಟ್ಟಿದ್ದಾರೆ.
ಐಪಿಎಲ್ನಲ್ಲಿ ಸಿಗುವ ಪ್ರೇಕ್ಷಕರ ಬೆಂಬಲ ಬೇರೆಲ್ಲೂ ಸಿಗರಾರದು ಎಂದಿರುವ ರಸೆಲ್, ಇದೇ ವೇಳೆ ತಾವು ನಿವೃತ್ತಿ ಹೊಂದುವುದಾದರೆ ಅದು ಕೆಕೆಆರ್ ತಂಡದಲ್ಲಿ ಎಂದು ಹೇಳಿಕೊಂಡಿದ್ದಾರೆ. "ಇದು ನನ್ನ ಕೊನೆಯ ಐಪಿಎಲ್ ಎಂದು ನನಗೆ ಅನಿಸುವವರೆಗೂ ನಾನು ಕೆಕೆಆರ್ ತಂಡದಲ್ಲೇ ಆಡಲು ಬಯಸುತ್ತೇನೆ. ಕಳೆದ ಆರು ಆವೃತ್ತಿಗಳಲ್ಲಿ ನಾನು ಕೆಕೆಆರ್ ಪರ ಆಡಿದ್ದೇನೆ. ತಂಡದೊಂದಿಗೆ ಪ್ರತಿಯೊಂದು ಕ್ಷಣವನ್ನು ಆನಂದಿಸಿದ್ದೇನೆ. ಒಂದೆರಡು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿ ಮೂರನೇ ಪಂದ್ಯದಲ್ಲಿ ಕಣಕ್ಕಿಳಿದಾಗಲೂ ನನಗೆ ಪ್ರೇಕ್ಷಕರಿಂದ ಅದೇ ರೀತಿಯ ಬೆಂಬಲ ಸಿಗುತ್ತದೆ. ಇದನ್ನು ಸದಾ ಸ್ವಾಗತಿಸುತ್ತೇನೆ," ಎಂದು ರಸೆಲ್ ವಿವರಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 