ರಾಜ್ಯದಲ್ಲಿ ಆರ್ಥಿಕ ಸಂಕಷ್ಟವಿಲ್ಲ: ಸಿಎಂ
There is no financial crisis in the state: CM
ಹುಬ್ಬಳ್ಳಿ 08 : ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ಪ್ರತಿಪಕ್ಷ ಬಿಜೆಪಿ ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈವರೆಗೆ ಸರ್ಕಾರ ಘೋಷಿಸಿರುವ ಯಾವುದೇ ಯೋಜನೆಗಳು ನಿಂತಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿವೆ. ಒಂದೆಡೆ ಬಿಜೆಪಿ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರೆ, ಇನ್ನೊಂದೆಡೆ ಬೇರೆ ರಾಜ್ಯಗಳಲ್ಲಿ ತಾವೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದೆ ಎಂದು ಲೇವಡಿ ಮಾಡಿದರು.
ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗಲಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗುವುದು. ಹಾಗೆಯೇ, ಸರ್ಕಾರ ಅಧಿವೇಶನದಲ್ಲಿ ಪ್ರತಿಪಕ್ಷವನ್ನು ಎದುರಿಸಲು ಸರ್ವಸನ್ನದ್ಧವಾಗಿದೆ ಎಂದು ಹೇಳಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 