ಬೆಂಗಳೂರಿನಲ್ಲಿ ಕತ್ತರಿಸಿದ ಹಣ್ಣುಗಳ ಮಾರಾಟಕ್ಕೆ ಅವಕಾಶವಿಲ್ಲ
ಬೆಂಗಳೂರು, ಏ. 3,ನಗರದಲ್ಲಿ ಜನರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಎಲ್ಲೆಂದರಲ್ಲಿ ಕತ್ತರಿಸಿಟ್ಟ ಹಣ್ಣು - ತರಕಾರಿ ಮಾರದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.ಬೆಂಗಳೂರು ನಗರದ ನಾಗರೀಕರಿಗೆ ಅಗತ್ಯವಾಗಿರುವ ಹಣ್ಣು, ತರಕಾರಿಗಳ ಕೊರತೆಯಾಗದಂತೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಬಿಬಿಎಂಪಿ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಜನರ ಆರೋಗ್ಯಕ್ಕಾಗಿ ಹಲವು ಪ್ರಮುಖ ಕ್ರಮಗಳನ್ನು ಕೈಗೊಳ್ಳಲಾಯಿತು.
ಕತ್ತರಿಸಿದ ಹಣ್ಣುಗಳ ಮಾರಾಟ ಸಂಬಂಧ ಜನರಿಂದ ಅಭಿಪ್ರಾಯ ಸಂಗ್ರಹಿಸಬೇಕು ಎಂದು ಸೂಚಿಸಲಾಯಿತು.ಹಣ್ಣು , ತರಕಾರಿಗಳ ಕೊರತೆಯಾಗದಂತೆ ನೇರ ಮಾರುಕಟ್ಟೆಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಇಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ಬಿಬಿಎಂಪಿ ಮೇಯರ್ ಕೊಠಡಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ರಸ್ತೆ ಬದಿಯ ಸಸ್ಯಗಳಿಗೆ ಉಚಿತ ನೀರು ಪೂರೈಸಲು, ಹಾಪ್ ಕಾಮ್ಸ್ ಮೂಲಕ ರೈತರು ಬೆಳೆದ ಹಣ್ಣುಗಳನ್ನು ಖರೀದಿಸಲು ಜಾಹೀರಾತು ಪ್ರಕಟಣೆ ನೀಡಲು ಆರ್ಡಬ್ಲ್ಯೂಎ ಸಂಘಕ್ಕೆ ಸೂಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಹಾಪ್ಕಾಮ್ಸ್ಗಳಿಂದ ಹಣ್ಣುಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಅನುಮತಿ ಪಡೆಯಲು ಮಾತುಕತೆ ನಡೆಸಿ ಹಣ್ಣು ತರಕಾರಿ ಸರಬರಾಜು ಆರಂಭಿಸಲು ತೀರ್ಮಾನಿಸಲಾಗಿದೆ. ಅಲ್ಲದೆ ನಂದಿನಿ ಬೂತ್ ಗಳಲ್ಲೂ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲು ಮತ್ತು ಹಾಪ್ಕಾಮ್ಸ್ ಗಳೊಂದಿಗೆ ಬಿಬಿಎಂಪಿ ವಾರ್ರೂಂನಲ್ಲಿ ನಾಳೆ ವೀಡಿಯೊ ಸಂವಾದ ನಡೆಸಲು ತೀರ್ಮಾನಿಸಲಾಯಿತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 