ಫೆ.6 ರಿಂದ ಮಾಗಡಿ ರೈತರಿಂದ ಅವರೆ ಮೇಳ
ಬೆಂಗಳೂರು,ಫೆ.5, ಮಾಗಡಿ ರೈತರಿಂದ ಅವರೆ ಬೇಳೆ ಹಾಗೂ ಇದರಿಂದ ತಯಾರಿಸಲಾದ ತಿಂಡಿ ತಿನಿಸುಗಳ ಮೇಳವನ್ನು ಫೆ.6 ರಿಂದ 16ರ ವರೆಗೆ ಸಜ್ಜನ್ ರಾವ್ ಸರ್ಕಲ್ ನಲ್ಲಿ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಿಳಿಸಿದೆ. ಸುದ್ದಿ ಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಈ ಮೇಳವನ್ನು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಉದ್ಘಾಟಿಸಲಿದ್ದು, ಮೇಳವು ರೈತರು ಮತ್ತು ಗ್ರಾಹಕರ ನಡುವೆ ನಡೆಯಲಿದೆ. ಅವರೆ ಬೇಳೆಯಿಂದ ತಯಾರಿಸಿದ 100 ಬಗೆಯ ತಿಂಡಿ ತಿನಿಸುಗಳನ್ನು ಮೇಳದಲ್ಲಿ ಇಡಲಾಗುವುದು ಎಂದರು.ರೈತರು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದು ಸರ್ಕಾರದ ಜವಾಬ್ದಾರಿ. ಆದರೆ ಸರ್ಕಾರ ರೈತರನ್ನು ಉತ್ತೇಜಿಸುವ ಬದಲು ಅವರ ಅನ್ನ ಕಸಿದುಕೊಳ್ಳುವ ಕೆಲಸ ಮಾಡುತ್ತಿವೆ. ಸಜ್ಜನ್ ರಾವ್ ಸರ್ಕಲ್ ನಲ್ಲಿ ರೈತರು ಮೇಳ ನಡೆಸದಂತೆ ಕೆಲ ಕಾಣದ ಕೈಗಳು ತಡೆ ಹಿಡಿದಿದ್ದು, ಇದು ರೈತರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಒಂದು ವೇಳೆ ಮೇಳ ನಡೆಯುವುದನ್ನು ತಡೆ ಹಿಡಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ರೈತರು ಪ್ರವಾಹ ಹಾಗೂ ಬರದಿಂದ ಇನ್ನೂ ಚೇತರಿಸಿಕೊಳ್ಳದೆ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ 1400 ಕೋಟಿ ಸಾಲ ಮನ್ನಾ ಮಾಡಲಿ ಎಂದು ಒತ್ತಾಯಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 