ದೇಶದ ಏಕತೆಗೆ ಧಕ್ಕೆ: ನಾಗೇಶ ಹೆಗಡ್ಯಾಳ
Threat to the unity of the country: Nagesh Hegdyal
ಲೋಕದರ್ಶನ ವರದಿ
ಇಂಡಿ 28 : ಹಿಂದಿ ವಿಷಯದಲ್ಲಿ ಶಾಲಾ ಶಿಕ್ಷಣ ಇಲಾಖೆ ತೆಗೆದುಕೊಂಡ ಹೊಸ ನಿಯಮವನ್ನು ದೇಶದ ಏಕತೆ ಹಾಗೂ ದೇಶೀಯ ಭಾಷೆಗಳ ಹಿತರಕ್ಷಣೆಯ ದೃಷ್ಟಿಯಿಂದ ಈ ನಿರ್ಧಾರವನ್ನು ಮರು ಪರೀಶೀಲಿಸಬೇಕು ಎಂದು ಬಿಜೆಪಿ ಮುಖಂಡರಾದ ನಾಗೇಶ ಹೆಗಡ್ಯಾಳ ಒತ್ತಾಯಿಸಿದ್ದಾರೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 2026ರ ಪರೀಕ್ಷೆಯಿಂದಲೇ ಅನ್ವಯವಾಗುವಂತೆ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಅಂಕ ನೀಡುವ ಪದ್ಧತಿ ಕೈಬಿಟ್ಟು, ಗ್ರೇಡ್ ಎ,ಬಿ,ಸಿ,ಡಿ ಎಂದು ನಮೂದಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಹಿಂದಿ ಭಾಷೆಯ ಶಿಕ್ಷಕರ ಭವಿಷ್ಯದ ದೃಷ್ಟಿಯಿಂದ ಹಾಗೂ ಮಕ್ಕಳ ಸರ್ವಾಂಗಿಣ ವಿಕಸನದ ದೃಷ್ಟಿಯಿಂದ ಸರ್ಕಾರವು ಈ ನಿರ್ಧಾರವನ್ನು ಕೈಬಿಡಬೇಕು ಎಂದರು. ನಮ್ಮ ರಾಜ್ಯದ ಮಕ್ಕಳು ಮುಂದೆ ಐಎಎಸ್, ಐಪಿಎಲ್, ಐಎಫ್ಎಸ್ ನಂತಹ ದೊಡ್ಡ ಹುದ್ದೆಗಳಿಗೆ ಆಯ್ಕೆಯಾದ ನಂತರ ದೇಶದ ಯಾವುದೇ ಭಾಗದಲ್ಲಿ ಸೇವಿ ಸಲ್ಲಿಸಲು ಹೋದಾಗ ಹಿಂದಿ ಓದಲು, ಬರೆಯಲು, ಮಾತನಾಡಲು ಅಡಚಣೆಯಾಗುತ್ತದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 