ದೆಹಲಿಯಲ್ಲಿ ಮೂರು ದಿನಗಳ ಇಂಡಿಯಾ ಮೊಬೈಲ್ ಕಾಂಗ್ರೆಸ್
ನವದೆಹಲಿ, ಅ 15: ಟೆಲಿಕಾಂ ವಲಯದಲ್ಲಿ ಅತ್ಯಂತ ಪ್ರಮುಖ ಎಂದು ಪರಿಗಣಿಸಲಾಗಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್ ದೆಹಲಿಯಲ್ಲಿ ಸೋಮವಾರದಿಂದ ಪ್ರಾರಂಭಗೊಂಡಿದೆ.
5 ಜಿ ಸೇವೆಗಳು ಪ್ರಮುಖ ಆಕರ್ಷಣೆಯಾಗಿರುವ ಈ ಸಮಾವೇಶದಲ್ಲಿ 500ಕ್ಕೂ ಹೆಚ್ಚು ಟೆಲಿಕಾಂ ಕಂಪನಿಗಳು ಮತ್ತು 250 ಸ್ಟಾಟರ್್ಅಪ್ಗಳು ಪಾಲ್ಗೊಂಡು ತಮ್ಮ ನೂತನ ತಂತ್ರಜ್ಞಾನ, ಅವಿಷ್ಕಾರಗಳನ್ನು ಪ್ರದರ್ಶಿಸಿವೆ.
ಮೂರು ದಿನಗಳ ಕಾಲ ನಡೆಯಲಿರುವ ಸಮಾವೇಶದಲ್ಲಿ ದಕ್ಷಿಣ ಏಷ್ಯಾದಲ್ಲಿ ಅತ್ಯಂತ ಪ್ರಮುಖ ಕಾರ್ಯಕ್ರಮ ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟರು.
ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮಾತನಾಡಿ, ತರಂಗಾಂತರ ಹರಾಜಿನಲ್ಲಿ ಸರ್ಕಾರ ಸುಧಾರಣೆಗಳನ್ನು ತರಲಿದೆ. ಹೆಚ್ಚುವರಿ ತರಂಗಾಂತರ ಹರಾಜು ಈ ಆರ್ಥಿಕ ವರ್ಷ ನಡೆಯಲಿದೆ ಹೇಳಿದ್ದಾರೆ.
ಭಾರತದಲ್ಲಿ ಪ್ರತಿವರ್ಷ ಅಪಾರ ಪ್ರಮಾಣದ ಡಿಜಿಟಲ್ ಮಾಹಿತಿ ಸೃಷ್ಟಿಸಲಾಗುತ್ತದೆ. ಭವಿಷ್ಯದಲ್ಲಿ ಡೇಟಾ ವಿಶ್ಲೇಷಣೆಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ವೊಡಾಫೋನ್ ಐಡಿಯಾ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ಹಾಗೂ ಭಾರ್ತಿ ಏರ್ಟೆಲ್ ಉಪಾಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ, ಪ್ರಮುಖ ಟೆಲಿಕಾಂ ಕಂಪನಿಗಳ ಮುಖ್ಯಸ್ಥರಾದ ಮುಖೇಶ್ ಅಂಬಾನಿ ಮತ್ತು ಸುನಿಲ್ಮಿತ್ತಲ್ ಗೈರುಹಾಜರಾಗಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 