ಮಗಳು ಪರಾರಿ; ಮನನೊಂದು ಒಂದೇ ಕುಟುಂಬದ ಮೂವರು ನೀರಿಗೆ ಹಾರಿ ಆತ್ಮಹತ್ಯೆ
Three members of the same family commit suicide by jumping into water
ಎಚ್.ಡಿ.ಕೋಟೆ 24: ಪಟ್ಟಣದ ಹೆಬ್ಬಾಳ ಜಲಾಶಯದಲ್ಲಿ ನೀರಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶನಿವಾರ ಮುಂಜಾನೆ ಜಲಾಶಯಕ್ಕೆ ಆಗಮಿಸಿದ ಮೂವರೂ ಡೆತ್ ನೋಟ್ ಬರೆದು, ದಡದಲ್ಲಿ ಬೈಕ್ ನಿಲ್ಲಿಸಿ, ನೀರಿಗೆ ಹಾರಿದ್ದಾರೆ. ಗ್ರಾಮಸ್ಥರು ಆ ಮಾರ್ಗವಾಗಿ ಸಂಚರಿಸುವಾಗ ಬೈಕ್ ನಿಲ್ಲಿಸಿರುವುದನ್ನು ಗಮನಿಸಿ, ಚಪ್ಪಲಿಗಳೂ ದಡದಲ್ಲಿ ಬಿಟ್ಟಿರುವುದನ್ನು ನೋಡಿ ಪರಿಶೀಲಿಸಿದಾಗ ಬೈಕ್ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ನಂತರ ಅವರು ಪೊಲೀಸರಿಗೆ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು.
‘ಈಚೆಗೆ ಮಹದೇವಸ್ವಾಮಿ ದಂಪತಿಯ ಮೊದಲನೇ ಮಗಳು ಮನೆ ಬಿಟ್ಟು ಹೋಗಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಡೆತ್ ನೋಟ್ ಪರಿಶೀಲನೆ ಮಾಡಿದ ಬಳಿಕ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ತಿಳಿಸಿದರು.ಎಚ್.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ (55), ಪತ್ನಿ ಮಂಜುಳಾ (42), ಪುತ್ರಿ ಹರ್ಷಿತಾ ಮೃತಪಟ್ಟವರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 