ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಅವರಿಂದ ತ್ರಿಚಕ್ರ ವಾಹನ ವಿತರಣೆ
Three-wheeler distribution by Legislative Council MLA S.V. Sankanura
ಗದಗ 12: ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಅವರು ಗುರುವಾರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ವಿಕಲಚೇತನ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು.
ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಖರೀದಿಸಲಾದ ಎರಡು ವಾಹನಗಳನ್ನು ವಿತರಿಸಿ ನಂತರ ಮಾತನಾಡಿದ ಅವರು ವಿಕಲಚೇತನರು ತ್ರಿಚಕ್ರ ವಾಹನದ ಸದ್ಭಳಕೆ ಮಾಡಿಕೊಳ್ಳಬೇಕು. ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಅರ್ಹ ವಿಕಲಚೇತನರು ಪಡೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕೆ, ಗಣ್ಯರಾದ ರಾಜು ಕುರಡಗಿ, ಲಿಂಗರಾಜ ಪಾಟೀಲ, ಪ್ರಕಾಶ ಅಂಗಡಿ, ಸುರೇಶ ಮರಳಪ್ಪನವರ, ಬೂದಪ್ಪ ಹಳ್ಳಿ , ಇಲಾಖೆಯ ಸಿಬ್ಬಂದಿ ವರ್ಗ ಸೇರಿದಂತೆ ಇತರರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 