ಇಂದು ಚಿಮ್ಮಡ ಗ್ರಾಮದಲ್ಲಿ ಗವಿಸಿದ್ದೇಶ್ವರ ಶ್ರೀ ಸದ್ಭಾವನಾ ಪಾದಯಾತ್ರೆ
Today is Gavisiddeshwara Sri Sadbhavana Padayatra in Chimmada village
ಮಹಾಲಿಂಗಪುರ 25: ಸಮೀಪದ ಚಿಮ್ಮಡ ಗ್ರಾಮದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿಗಳಿಂದ ಸದ್ಭಾವನಾ ಪಾದಯಾತ್ರೆ ಇಂದು ನ.26ರಂದು ಬೆಳಗ್ಗೆ 6:30ಕ್ಕೆ ಜರುಗಲಿದೆ ಎಂದು ವಿರಕ್ತಮಠದ ಪ್ರಭು ಸ್ವಾಮೀಜಿ ತಿಳಿಸಿದ್ದಾರೆ.
ಸದ್ಭಾವನಾ ಪಾದಯಾತ್ರೆಯು ಬೆಳಗ್ಗೆ ಗ್ರಾಮದ ದುರ್ಗಾದೇವಿ ದೇವಸ್ಥಾನದಿಂದ ನೇತಾಜಿ ವೃತ್ತದ ಮಾರ್ಗವಾಗಿ ಭಜಂತ್ರಿ ಓಣಿ, ಕರಿಸಿದ್ದೇಶ್ವರ ದೇವಸ್ಥಾನ, ಯಲ್ಲಮ್ಮನ ಗುಡಿ, ಕನಕದಾಸ ವೃತ್ತದಿಂದ ಚನ್ನಮ್ಮ ವೃತ್ತ, ವಿರಕ್ತಮಠ, ವಿರಕ್ತಮಠ, ದಾಸಿಮಯ್ಯ ವೃತ್ತದ ಮಾರ್ಗದಿಂದ ಬಸ್ ನಿಲ್ದಾನದವರೆಗೆ ಮಾದಯಾತ್ರೆ ಜರುಗಲಿದೆ. ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಬೆಳಗ್ಗೆ 7:30ಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಪ್ರವಚನ ಕಾರ್ಯಕ್ರಮ ನಡೆಯಲಿದೆ.
ಗ್ರಾಮಸ್ಥರು ಬೆಳಿಗ್ಗೆ ಮನೆ ಹಾಗೂ ಬೀದಿಗಳಲ್ಲಿ ರಂಗೋಲಿ ಹಾಕಿ ಗ್ರಾಮವನ್ನು ವಿಶೇಷವಾಗಿ ಸಿಂಗರಿಸಿ ಶ್ರೀಗಳನ್ನು ಭಕ್ತಿಯಿಂದ ಸ್ವಾಗತಿಸಬೇಕು ಹಾಗೂ ಪ್ರವಚನ ಕಾರ್ಯಕ್ರಮದಲ್ಲಿ ಭಕ್ತರುಭಾಗವಹಿಸಿ ಗವಿಶ್ರೀಗಳ ದರ್ಶನ, ವಾಣಿಯನ್ನು ಕೇಳಿ ಪುನೀತರಾಗಬೇಕೆಂದು ಪ್ರಭುಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿಯ ಪ್ರಮುಖರು ತಿಳಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 