ಇಂದು ಚಿಮ್ಮಡ ಗ್ರಾಮದಲ್ಲಿ ಗವಿಸಿದ್ದೇಶ್ವರ ಶ್ರೀ ಸದ್ಭಾವನಾ ಪಾದಯಾತ್ರೆ
Today is Gavisiddeshwara Sri Sadbhavana Padayatra in Chimmada village
ಮಹಾಲಿಂಗಪುರ 25: ಸಮೀಪದ ಚಿಮ್ಮಡ ಗ್ರಾಮದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿಗಳಿಂದ ಸದ್ಭಾವನಾ ಪಾದಯಾತ್ರೆ ಇಂದು ನ.26ರಂದು ಬೆಳಗ್ಗೆ 6:30ಕ್ಕೆ ಜರುಗಲಿದೆ ಎಂದು ವಿರಕ್ತಮಠದ ಪ್ರಭು ಸ್ವಾಮೀಜಿ ತಿಳಿಸಿದ್ದಾರೆ.
ಸದ್ಭಾವನಾ ಪಾದಯಾತ್ರೆಯು ಬೆಳಗ್ಗೆ ಗ್ರಾಮದ ದುರ್ಗಾದೇವಿ ದೇವಸ್ಥಾನದಿಂದ ನೇತಾಜಿ ವೃತ್ತದ ಮಾರ್ಗವಾಗಿ ಭಜಂತ್ರಿ ಓಣಿ, ಕರಿಸಿದ್ದೇಶ್ವರ ದೇವಸ್ಥಾನ, ಯಲ್ಲಮ್ಮನ ಗುಡಿ, ಕನಕದಾಸ ವೃತ್ತದಿಂದ ಚನ್ನಮ್ಮ ವೃತ್ತ, ವಿರಕ್ತಮಠ, ವಿರಕ್ತಮಠ, ದಾಸಿಮಯ್ಯ ವೃತ್ತದ ಮಾರ್ಗದಿಂದ ಬಸ್ ನಿಲ್ದಾನದವರೆಗೆ ಮಾದಯಾತ್ರೆ ಜರುಗಲಿದೆ. ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಬೆಳಗ್ಗೆ 7:30ಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಪ್ರವಚನ ಕಾರ್ಯಕ್ರಮ ನಡೆಯಲಿದೆ.
ಗ್ರಾಮಸ್ಥರು ಬೆಳಿಗ್ಗೆ ಮನೆ ಹಾಗೂ ಬೀದಿಗಳಲ್ಲಿ ರಂಗೋಲಿ ಹಾಕಿ ಗ್ರಾಮವನ್ನು ವಿಶೇಷವಾಗಿ ಸಿಂಗರಿಸಿ ಶ್ರೀಗಳನ್ನು ಭಕ್ತಿಯಿಂದ ಸ್ವಾಗತಿಸಬೇಕು ಹಾಗೂ ಪ್ರವಚನ ಕಾರ್ಯಕ್ರಮದಲ್ಲಿ ಭಕ್ತರುಭಾಗವಹಿಸಿ ಗವಿಶ್ರೀಗಳ ದರ್ಶನ, ವಾಣಿಯನ್ನು ಕೇಳಿ ಪುನೀತರಾಗಬೇಕೆಂದು ಪ್ರಭುಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿಯ ಪ್ರಮುಖರು ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 