ಇಂದು ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್.ಡಿ.ದೇವೇಗೌಡರ ಸರಳ ಹುಟ್ಟುಹಬ್ಬ
ಬೆಂಗಳೂರು, ಮೇ 18,ಇಂದು ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್. ಡಿ ದೇವೇಗೌಡ ಅವರಿಗೆ 88ನೇ ಹುಟ್ಟುಹಬ್ಬದ ಸಂಭ್ರಮ. ಕೊರೋನಾ ಸೋಂಕು ನಿಯಂತ್ರಣ ಉದ್ದೇಶದಿಂದ ಸಾಮಾಜಿಕ ಅಂತರ ನಿಯಮದಿಂದಾಗಿ ದೇವೇಗೌಡರು ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಮನೆಯ ಸದಸ್ಯರೊಂದಿಗೆ ಕೇಕ್ ಕತ್ತರಿಸಿ ಮನೆಯಲ್ಲಿಯೇ ಕಾಲಕಳೆಯುತ್ತಿದ್ದಾರೆ. ಹಿರಿಯ ರಾಜಕಾರಣಿಯ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಕೋರಿ, ದೇವರು ಸುದೀರ್ಘ ಆರೋಗ್ಯ ಹಾಗೂ ಆಯಶ್ಸು ಕೊಡಲೆಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.
ಇನ್ನು ಟ್ವೀಟ್ ಮೂಲಕ ತಂದೆಯ ಜನ್ಮದಿನಕ್ಕೆ ಶುಭಾಶಯ ಕೋರಿದ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ, ದೇಶದ ಅತ್ಯುನ್ನತ, ಅಸಾಮಾನ್ಯ ಹುದ್ದೆಯನ್ನು ಸಾಮಾನ್ಯನೂ ಅಲಂಕರಿಸಬಹುದು ಎಂಬುದು ಭಾರತದ ಪ್ರಜಾಪ್ರಭುತ್ವದ ಸೌಂದರ್ಯ. ಈ ಮಾತನ್ನು, ಹಳ್ಳಿಯ ಮಣ್ಣಿಂದ ಬಂದು, ರಾಷ್ಟ್ರೀಯ ಪಕ್ಷದ ಹಿನ್ನೆಲೆ ಇಲ್ಲದೇ ಸಾಧಿಸಿ ತೋರಿಸಿದ ನೀವು ನಮಗೆಲ್ಲಾ ಮಾದರಿ. ಬದ್ಧತೆ, ಛಲ, ಪರಿಶ್ರಮ, ಹೋರಾಟ ಮತ್ತು ನಾಡಿಗೆ ಹೆಗ್ಗುರುತಾಗಿರುವ ಅವರ ಜನ್ಮದಿನಕ್ಕೆ ಶುಭಾಶಯಗಳು ಎಂದಿದ್ದಾರೆ.ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ ಮನೆ ಬಳಿ ಬಾರದಂತೆ ಮನವಿ ಮಾಡಿದ್ದು,ಕೊರೊನಾ ಹಿನ್ನೆಲೆಯಲ್ಲಿ ಜನ ಸೇರುವುದು ಅಪಾಯಕಾರಿ. ಹಾಗಾಗಿ ಯಾರೂ ಕೂಡಾ ಮನೆ ಬಳಿ ಬಾರದಂತೆ ಮನವಿ ಮಾಡಿದ್ದಾರೆ. ಅಭಿಮಾನಿಗಳು ಕಾರ್ಯಕರ್ತರು ಇರುವೆಡೆಯಿಂದಲೇ ಶುಭಕೋರುವಂತೆ ಕರೆ ನೀಡಿದ್ದಾರೆ.ಹಟ್ಟು ಹಬ್ಬದ ಪ್ರಯುಕ್ತ ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಮೇಲ್ಮನೆ ಸದಸ್ಯ ಶರವಣ ನೇತೃತ್ವದಲ್ಲಿ ರಕ್ತದಾನ ಶಿಬಿರ ಏರ್ಪಡಿಸಿದ್ದು, ರಕ್ತದಾನ ಶಿಬಿರವನ್ನು ದೇವೇಗೌಡರು ಉದ್ಘಾಟನೆ ಮಾಡಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 