ಇಂದು ತೊಗರಿ ಬೆಳೆ ಪರಿಹಾರಕ್ಕಾಗಿ ಹೋರಾಟ
Today the struggle for the solution of the sorghum crop
ಇಂದು ತೊಗರಿ ಬೆಳೆ ಪರಿಹಾರಕ್ಕಾಗಿ ಹೋರಾಟ
ತಾಳಿಕೋಟಿ 08 : ತಾಲೂಕಿನ ಬಹುತೇಕ ಕಡೆ ರೈತರು ಈ ವರ್ಷ ಬೆಳೆದ ತೊಗರಿ ಬೆಳೆ ಹೂವು,ಕಾಪು ಉದುರುವುದು ಎಲೆಗಳು ಸಣ್ಣದಾಗಿ ಇಳುವರಿ ಕಡಿಮೆಯಾಗಿರುವುದು ರೈತರಲ್ಲಿ ಆತಂಕವನ್ನು ಸೃಷ್ಟಿಸಿದ್ದು ಸರ್ಕಾರ ಕೂಡಲೇ ತೊಗರಿ ಬೆಳೆದ ರೈತರ ಬೆಳೆಯ ಸಮೀಕ್ಷೆಯನ್ನು ನಡೆಸಿ ಹಾನಿಗೆ ಸೂಕ್ತ ಪರಿಹಾರ ನೀಡಬೇಕು, ಕಳಪೆ ಬೀಜ ವಿತರಿಸಿದ ಕಂಪನಿ ಮಾಲೀಕರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಹಮ್ಮಿಕೊಂಡ ರೈತ ಸಂಘಟನೆಗಳ ಪ್ರತಿಭಟನಾ ಮೆರವಣಿಗೆ ಇಂದು ನಡೆಯಲಿದೆ.ಮುಂಜಾನೆ 10:00 ಘಂಟೆಯಿಂದ ಎಲ್ಲಾ ಗ್ರಾಮಗಳಿಂದ ರೈತರು ತಮ್ಮ ತಮ್ಮ ಟ್ಯಾಕ್ಟರ್ ಸಮೇತ ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಭಾಗವಹಿಸುವರು,ಶ್ರೀ ಬಸವೇಶ್ವರ ವೃತ್ತದಿಂದ ಟ್ರ್ಯಕ್ಟರ್ ಮೆರವಣಿಗೆ ಆರಂಭವಾಗಿ ಡಾ.ಅಂಬೇಡ್ಕರ್ ಸರ್ಕಲ್, ಕತ್ರಿ ಬಜಾರ್, ಶಿವಾಜಿ ಸರ್ಕಲ್, ಮಹಾರಾಣಾ ಪ್ರತಾಪ್ ಸಿಂಹ ಸರ್ಕಲ್ ಬಸ್ ನಿಲ್ದಾಣ ಮಾರ್ಗವಾಗಿ ಮತ್ತೇ ಬಸವೇಶ್ವರ ವೃತ್ತಕ್ಕೆ ಬಂದು ಅಲ್ಲಿ ಸಭೆಯಾಗಿ ಮಾರು್ಡವುದು. ನಂತರ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ತಾಲೂಕಾಡಳಿತಕ್ಕೆ ಮನವಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 