ಕೊಪ್ಪಳದಲ್ಲಿ ಧಾರಾಕಾರ ಮಳೆ: ನೀರು ನುಗ್ಗಿದ ಮನೆಗಳಿಗೆ ಶಾಸಕ ಹಿಟ್ನಾಳ ಭೇಟಿ
ಲೋಕದರ್ಶನ ವರದಿ
ಕೊಪ್ಪಳ: ಜಿಲ್ಲೆಯಾದ್ಯಂತ ಸುರಿದ ಧಾರಾಕಾರ ಮಳೆಗೆ ಕೊಪ್ಪಳ ನಗರದ ಕುವೆಂಪು ನಗರದಲ್ಲಿ ಸುಮಾರು 17 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು ಜನಜೀವನಕ್ಕೆ ತೊಂದರೆಯಾಗಿದೆ.
ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಭೇಟಿ ನೀಡಿ 17 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿನ ದವಸ ಧಾನ್ಯ, ಟಿ.ವಿ.ಅಡುಗೆ ಸಾಮಾನುಗಳು ನೀರು ಪಾಲಾದ್ದನ್ನು ಗಮನಿಸಿ ಸ್ಥಳದಲ್ಲಿದ್ದ ತಹಶೀಲ್ದಾರ ಜೆ.ಬಿ.ಮಜ್ಜಿಗಿ, ನಗರಸಭೆ ಪೌರಾಯುಕ್ತ ಸುನೀಲ್ಕುಮಾರ ಅವರಿಗೆ ತಕ್ಷಣ 24 ಗಂಟೆಯೊಳಗೆ ಅಗತ್ಯ ಕ್ರಮ ಕೈಗೊಂಡು ಪರಿಹಾರಕ್ಕೆ ಸೂಚಿಸಿದರು.
ಭಾರಿ ಮಳೆ: ಕೊಪ್ಪಳ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಅವಾಂತರ ಸೃಷ್ಟಿಯಾಗಿದೆ.ಮನೆಯೊಳಗೆ ಮಳೆ ನೀರು ನುಗ್ಗಿದ ಹಿನ್ನಲೆ ಕೂಡಿಟ್ಟಿದ್ದ ಧವಸ ಧಾನ್ಯ ನೀರು ಪಾಲಾಗಿದೆ. ಮನೆಯಲ್ಲಿ ಕುಳಿತುಕೊಳ್ಳಲು, ನಿಲ್ಲಲೂ ಜಾಗವಿಲ್ಲದೆ ಇಡೀ ರಾತ್ರಿ ನಿವಾಸಿಗಳು ಜಾಗರಣೆ ಮಾಡುವಂತ ಪರಿಸ್ಥಿತಿ ಎದುರಾಗಿದೆ. ನೀರನ್ನು ಮನೆಯಿಂದ ಹೊರ ಹಾಕಲು ಜನ ಹರಸಾಹಸ ಪಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು.ರಾತ್ರಿ ಪೂತರ್ಿ ಸುರಿದ ಭಾರಿ ಮಳೆಗೆ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಜೊತೆಗೆ ಗುಂಡೂರು-ಲಕ್ಷ್ಮೀ ಕ್ಯಾಂಪ್ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಲಕ್ಷ್ಮೀ ಕ್ಯಾಂಪ್ ಮತ್ತು ಗುಂಡೂರಿನ ನಡುವಿನ ಸಂಪರ್ಕ ಕಡಿತಗೊಂಡಿದೆ. ಜೊತೆಗೆ ಕುಷ್ಟಗಿ ತಾಲೂಕಿನ ಕಂದಕೂರು ನಾಗರಾಳ ಮಧ್ಯದಲ್ಲಿರುವ ಹಳ್ಳ ಭೋರ್ಗರೆಯುತ್ತಿದ್ದು ಅಲ್ಲಿಯೂ ಕೂಡ ಸಂಪರ್ಕ ಕಡಿತಗೊಂಡಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 